ADVERTISEMENT

ಮಹಾದಾಯಿ ತಂಡದಿಂದ ಬಂಡೂರಿ ನಾಲಾ ಪ್ರದೇಶ ವೀಕ್ಷಣೆ

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2013, 19:55 IST
Last Updated 19 ಡಿಸೆಂಬರ್ 2013, 19:55 IST

ಖಾನಾಪುರ: ಬಂಡೂರಿ ನಾಲಾದಿಂದ ಮಲಪ್ರಭಾ ನದಿಗೆ ನೀರು ಹರಿಸುವ ಯೋಜನೆಯ ಉದ್ದೇಶಿತ ಕಾಮಗಾರಿ ಸ್ಥಳಕ್ಕೆ ಮಹಾದಾಯಿ ಜಲವಿವಾದ ನ್ಯಾಯಮಂಡಳಿ ಅಧ್ಯಕ್ಷ ನ್ಯಾಯ ಮೂರ್ತಿ ಜೆ.ಎಂ. ಪಾಂಚಾಲ್‌ ನೇತೃ ತ್ವದ ಗುರುವಾರ ಭೇಟಿ ನೀಡಿ ಪರಿಶೀಲಿಸಿತು.

ತಾಲ್ಲೂಕಿನ ನೇರಸಾ ಗ್ರಾಮದಿಂದ ಎರಡು ಕಿ.ಮೀ ದೂರವಿರುವ, ನೇರಸಾ–-ಕೊಂಗಳಾ ಗ್ರಾಮಗಳ ನಡುವಿನ ಭೀಮಗಡ ಅರಣ್ಯ ಪ್ರದೇಶದಲ್ಲಿ ಹರಿಯುವ ಬಂಡೂರಿ ನಾಲಾ ಪ್ರದೇಶಕ್ಕೆ ನ್ಯಾಯಮಂಡಳಿಯ ತಂಡ ಹಾಗೂ ನೀರಾವರಿ ನಿಗಮದ ಅಧಿಕಾರಿಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿತ್ತು.

ನೇರಸಾ ಹಾಗೂ ಅಶೋಕ ನಗರ ಗ್ರಾಮಸ್ಥರು ಮಹಾದಾಯಿ ನ್ಯಾಯ ಮಂಡಳಿಗೆ ತಮ್ಮ ಊರುಗಳಿಗೂ  ಕುಡಿಯುವ ನೀರು ಪೂರೈಕೆಗೆ ಅವಕಾಶ ಕಲ್ಪಿಸಬೇಕು ಎಂಬ ಮನವಿಯನ್ನು ನೀಡಲು ಬಯಸಿದ್ದರು. ಪೊಲೀಸ್ ಹಾಗೂ ಅರಣ್ಯ ಇಲಾಖೆಯ ನಿರ್ಬಂಧದಿಂದ ಗ್ರಾಮಸ್ಥರು ತಂಡವನ್ನು ಭೇಟಿ ಮಾಡಲು ಪರದಾಡ ಬೇಕಾ ಯಿತು.

ಸ್ಥಳ ಪರಿಶೀಲನೆಯ ನಂತರ ನೀರಾವರಿ ನಿಗಮ, ಅರಣ್ಯ ಹಾಗೂ ಕಂದಾಯ ಇಲಾಖೆಗಳ ಅಧಿಕಾರಿಗಳ ಜೊತೆಗೆ ಸಭೆ ನಡೆಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.