ಬೆಂಗಳೂರು: ಹಿರಿಯ ಪತ್ರಕರ್ತ ಮೈಸೂರಿನ ಡಿ.ಮಹಾದೇವಪ್ಪ ಅವರು ಖಾದ್ರಿ ಶಾಮಣ್ಣ ಪತ್ರಿಕೋದ್ಯಮ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪ್ರಶಸ್ತಿಯು ಫಲಕ, ಅಭಿನಂದನಾ ಪತ್ರ ಮತ್ತು ಹದಿನೈದು ಸಾವಿರ ರೂಪಾಯಿ ನಗದು ಪುರಸ್ಕಾರ ಒಳಗೊಂಡಿದೆ.
ಜೂನ್ 6 ರಂದು ನಗರದಲ್ಲಿ ನಡೆಯಲಿರುವ ಖಾದ್ರಿ ಶಾಮಣ್ಣ ಜನ್ಮದಿನ ಸಮಾರಂಭದಲ್ಲಿ ಪ್ರಶಸ್ತಿ ನೀಡಲಾಗುವುದು. `ಲೋಕವಾಣಿ~ ದೈನಿಕದಿಂದ ವೃತ್ತಿ ಜೀವನ ಆರಂಭಿಸಿದ ಅವರು ಕನ್ನಡದ ಬೇರೆ ಬೇರೆ ಪತ್ರಿಕೆಗಳಲ್ಲಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.