ADVERTISEMENT

ಮಹಿಳೆಯ ಮಾನಭಂಗಕ್ಕೆ ಯತ್ನ–ಎಎಸ್‌ಐ ಬಂಧನ

​ಪ್ರಜಾವಾಣಿ ವಾರ್ತೆ
Published 24 ಮಾರ್ಚ್ 2018, 19:17 IST
Last Updated 24 ಮಾರ್ಚ್ 2018, 19:17 IST
ಮಹಿಳೆಯ ಮಾನಭಂಗಕ್ಕೆ ಯತ್ನ–ಎಎಸ್‌ಐ ಬಂಧನ
ಮಹಿಳೆಯ ಮಾನಭಂಗಕ್ಕೆ ಯತ್ನ–ಎಎಸ್‌ಐ ಬಂಧನ   

ನರಸಿಂಹರಾಜಪುರ: ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ ಆರೋಪದ ಮೇಲೆ ನರಸಿಂಹರಾಜಪುರ ಠಾಣೆಯ ಎಎಸ್‌ಐ ಕುಮಾರ ನಾಯ್ಕ ಎಂಬಾತನನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ. ನ್ಯಾಯಾಲಯ ಆತನಿಗೆ ಜಾಮೀನು ನೀಡಿದೆ.

ಚುನಾವಣಾ ಆಯುಕ್ತರ ಆದೇಶದ ಮೇರೆಗೆ ಚುನಾವಣೆಗೆ ಸಂಬಂಧಿಸಿದ ಮಾಹಿತಿ ಸಂಗ್ರಹಿಸಲು ತಾಲ್ಲೂಕಿನ ಕಾನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮವೊಂದಕ್ಕೆ ಶುಕ್ರವಾರ ಮಧ್ಯಾಹ್ನ  ಭೇಟಿ ನೀಡಿದ ಎಎಸ್‌ಐ, ಸ್ಥಳೀಯ ಮಾಹಿತಿದಾರರ ಸಹಿ ಪಡೆಯಲು ಗ್ರಾಮದ ಮನೆಯೊಂದಕ್ಕೆ ಹೋಗಿದ್ದ. ಮನೆಯಲ್ಲಿ ಮಹಿಳೆ ಒಬ್ಬರೇ ಇರುವುದನ್ನು ಗಮನಿಸಿ ಮಾನಭಂಗಕ್ಕೆ ಯತ್ನಿಸಿದ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಅಮಾನತು: ಆರೋಪಿಯನ್ನು ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಣ್ಣಾಮಲೈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.