ಬೆಂಗಳೂರು: ಮಾಜಿ ಸೈನಿಕರು, ಸೈನಿಕ ಕಾರ್ಯಾಚರಣೆಗಳಲ್ಲಿ ಮಡಿದ ಯೋಧರ ಅವಲಂಬಿತರಿಗೆ ಇದೇ 15ರಂದು ನಗರದ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಕರ್ನಾಟಕ ಮತ್ತು ಕೇರಳ ಉಪ ವಿಭಾಗದ ನಿವೃತ್ತ ಸೈನಿಕರ ಸಹಾಯವಾಣಿ ಈ ಮೇಳ ಆಯೋಜಿಸಿದೆ.
ಬೆಂಗಳೂರು ಮತ್ತು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ವಿಪುಲ ಉದ್ಯೋಗಾವಕಾಶಗಳು ಲಭ್ಯವಿವೆ. ಮೇಳದಲ್ಲಿ ವಿವಿಧ ಕೈಗಾರಿಕಾ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ರಕ್ಷಣಾ ಇಲಾಖೆಯ ಪ್ರಕಟಣೆ ತಿಳಿಸಿದೆ.
ಹೆಚ್ಚಿನ ಮಾಹಿತಿಗೆ 080-25559934 ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದು ಅಥವಾ esmjobfairkarnataka@gmail.com ಇ-ಮೇಲ್ ವಿಳಾಸಕ್ಕೆ ಮೇಲ್ ಕಳುಹಿಸಬಹುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.