ಬೆಂಗಳೂರು: ಸೋಮವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ಉತ್ತರ ಒಳನಾಡಿನಲ್ಲಿ ನೈರುತ್ಯ ಮುಂಗಾರು ಕ್ಷೀಣಿಸಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆಯಾಗಿದೆ. ಮಾಣಿಯಲ್ಲಿ 7 ಸೆಂ.ಮೀ.ಮಳೆಯಾಗಿದೆ.
ಬಂಟ್ವಾಳ, ನೀಲ್ಕುಂದ 6, ಮೂಡುಬಿದಿರೆ, ಬೆಳ್ತಂಗಡಿ, ಪುತ್ತೂರು, ಕೋಟ, ಶಿರಾಲಿ, ಗೋಕರ್ಣ, ಕ್ಯಾಸಲ್ ರಾಕ್ 4, ಪಣಂಬೂರು, ಮಂಗಳೂರು, ಧರ್ಮಸ್ಥಳ, ಉಪ್ಪಿನಂಗಡಿ, ಕುಂದಾಪುರ, ಕಾರವಾರ, ಭಾಗಮಂಡಲ, ಆಗುಂಬೆ, ಸೊರಬ 3,
ಮಂಗಳೂರು ವಿಮಾನ ನಿಲ್ದಾಣ, ಮೂಲ್ಕಿ, ಸುಬ್ರಹ್ಮಣ್ಯ, ಸುಳ್ಯ, ಉಡುಪಿ, ಕಾರ್ಕಳ, ಕೊಲ್ಲೂರು, ಸಿದ್ದಾಪುರ, ಹೊನ್ನಾವರ, ಭಟ್ಕಳ, ಕುಮಟಾ, ಅಂಕೋಲ, ಮಡಿಕೇರಿ, ಮೂರ್ನಾಡು, ತೀರ್ಥಹಳ್ಳಿ, ಶೃಂಗೇರಿ, ಕೊಟ್ಟಿಗೆಹಾರ, ಬಾಳೆಹೊನ್ನೂರು, ಎಚ್.ಡಿ.ಕೋಟೆ, ಸುತ್ತೂರು, ನಂಜನಗೂಡು, ಗುಡಿಬಂಡೆ 2,
ಶಿರಸಿ, ಯಲ್ಲಾಪುರ, ಸಿದ್ದಾಪುರ (ಉ.ಕ), ಲೋಂಡ, ಲಕ್ಷ್ಮೇಶ್ವರ, ಭಾಲ್ಕಿ, ಅಫಜಲ್ಪುರ, ನಾಪೋಕ್ಲು, ಪೊನ್ನಂಪೇಟೆ, ವಿರಾಜಪೇಟೆ, ಲಿಂಗನಮಕ್ಕಿ, ತಾಳಗುಪ್ಪ, ಹೊಸನಗರ, ಕಳಸ, ಮೂಡಿಗೆರೆ, ಕಮ್ಮರಡಿ ಹಾಗೂ ಕೊಪ್ಪದಲ್ಲಿ ತಲಾ 1 ಸೆಂ.ಮೀ.ಮಳೆಯಾಗಿದೆ.
ಮುನ್ಸೂಚನೆ: ಮುಂದಿನ 48 ಗಂಟೆಗಳಲ್ಲಿ ಕರಾವಳಿಯ ಹಲವೆಡೆ ಮತ್ತು ದಕ್ಷಿಣ ಒಳನಾಡಿನ ಘಟ್ಟ ಪ್ರದೇಶದ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.