ADVERTISEMENT

ಮಿಜೋರಾಂ ರಾಜ್ಯಪಾಲರಿಗೆ ನಗರದಲ್ಲಿ ಶಸ್ತ್ರಚಿಕಿತ್ಸೆ

​ಪ್ರಜಾವಾಣಿ ವಾರ್ತೆ
Published 17 ಫೆಬ್ರುವರಿ 2011, 17:10 IST
Last Updated 17 ಫೆಬ್ರುವರಿ 2011, 17:10 IST

ಬೆಂಗಳೂರು: ಮಿಜೋರಾಂನ ರಾಜ್ಯಪಾಲ ಎಂ.ಎಂ. ಲಖೇರ ಅವರಿಗೆ ನಗರದ ನಾರಾಯಣ ಹೃದಯಾಲಯದ ವೈದ್ಯರು ಯಶಸ್ವಿಯಾಗಿ ಬೈಪಾಸ್ ಶಸ್ತ್ರಚಿಕಿತ್ಸೆ ನಡೆಸಿದರು.
ಟ್ರಿಪಲ್ ವೆಸೆಲ್ ಬ್ಲಾಕ್ (ಹೃದಯದ ಮೂರು ನಳಿಕೆಗಳಲ್ಲಿ ರಕ್ತಸಂಚಾರಕ್ಕೆ ತೊಂದರೆ) ತೊಂದರೆಯಿಂದ ಬಳಲುತ್ತಿದ್ದ ಅವರು ಕಳೆದ ವಾರ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಸೋಮವಾರ (ಫೆ.14) ಶಸ್ತ್ರಚಿಕಿತ್ಸೆ ನಡೆಸಲಾಯಿತು. ಈಗ ಅವರ ಆರೋಗ್ಯ ಸ್ಥಿರವಾಗಿದ್ದು, 3-4 ದಿನಗಳಲ್ಲಿ ಅವರನ್ನು ಬಿಡುಗಡೆಗೊಳಿಸುವುದಾಗಿ ಆಸ್ಪತ್ರೆಯ ಸಿಬ್ಬಂದಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.