ADVERTISEMENT

ಮೀನುಗಾರಿಕೆ ಗುತ್ತಿಗೆ ವಿಸ್ತರಣೆ

​ಪ್ರಜಾವಾಣಿ ವಾರ್ತೆ
Published 15 ಆಗಸ್ಟ್ 2012, 19:30 IST
Last Updated 15 ಆಗಸ್ಟ್ 2012, 19:30 IST

ರಾಯಚೂರು: ರಾಜ್ಯದಲ್ಲಿ ಈ ಬಾರಿ ಬರಗಾಲದ ಪರಿಸ್ಥಿತಿ ಹಿನ್ನೆಲೆಯಲ್ಲಿ ಒಳನಾಡು ಮೀನುಗಾರಿಕೆ ಗುತ್ತಿಗೆ ಅವಧಿಯನ್ನು ಒಂದು ವರ್ಷಕ್ಕೆ ವಿಸ್ತರಿಸಲಾಗಿದೆ. ಕೆರೆಯಲ್ಲಿ ನೀರಿಲ್ಲದೇ ಮೀನುಗಾರಿಕೆ ಸ್ಥಗಿತಗೊಂಡಿದೆ. ಹೀಗಾಗಿ ಗುತ್ತಿಗೆ ಅವಧಿ ವಿಸ್ತರಿಸಲಾಗಿದೆ ಎಂದು ರಾಜ್ಯ ಮೀನುಗಾರಿಕೆ ಸಚಿವ ಆನಂದ ಅಸ್ನೋಟಿಕರ್ ಹೇಳಿದರು.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮೀನುಗಾರಿಕೆ ನಡೆಸಲು ಸೂಕ್ತವಾದ ಒಟ್ಟು 22 ಸಾವಿರ ಕೆರೆಗಳಿವೆ. 6 ಸಾವಿರ ಕೆರೆಗಳನ್ನು ಮೀನುಗಾರಿಕೆಗೆ ಗುತ್ತಿಗೆ ಕೊಡಲಾಗಿದೆ. ಗುತ್ತಿಗೆ ಅವಧಿಯನ್ನು ವಿಸ್ತರಿಸಲಾಗಿದೆ ಎಂದರು. ರಾಜ್ಯದಲ್ಲಿ ಹೊಸದಾಗಿ 20 ಕಡೆ ಮೀನು ಮಾರುಕಟ್ಟೆ ನಿರ್ಮಿಸಲು ಸರ್ಕಾರ ಚಿಂತಿಸುತ್ತಿದೆ ಎಂದು ತಿಳಿಸಿದರು.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.