ADVERTISEMENT

ಮೀಸಲು ಅರಣ್ಯದಲ್ಲಿ ಹುಲಿ ಸಾವು

​ಪ್ರಜಾವಾಣಿ ವಾರ್ತೆ
Published 13 ಮಾರ್ಚ್ 2018, 19:30 IST
Last Updated 13 ಮಾರ್ಚ್ 2018, 19:30 IST
ಮೀಸಲು ಅರಣ್ಯದಲ್ಲಿ ಹುಲಿ ಸಾವು
ಮೀಸಲು ಅರಣ್ಯದಲ್ಲಿ ಹುಲಿ ಸಾವು   

ನರಸಿಂಹರಾಜಪುರ: ತಾಲ್ಲೂಕಿನ ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆ.ಕಣಬೂರು ಗ್ರಾಮದ ಶ್ರೀಗಂಧ ಮೀಸಲು ಅರಣ್ಯದಲ್ಲಿ ಹುಲಿ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ.

ಕೆ.ಕಣಬೂರು ಸರ್ವೇ ನಂ. 62 ಕೆಸರಕಟ್ಟೆಯ ಮೀಸಲು ಅರಣ್ಯ ಪ್ರದೇಶದಲ್ಲಿ ಸೋಮವಾರ ಅರಣ್ಯ ಇಲಾಖೆ ಸಿಬ್ಬಂದಿ ಗಸ್ತು ತಿರುಗುವ ವೇಳೆ ಹುಲಿಯ ಮೃತದೇಹ ಪತ್ತೆಯಾಗಿದೆ. 4ರಿಂದ 5 ವರ್ಷದ ಗಂಡು ಹುಲಿ ಇದಾಗಿದ್ದು, 20 ದಿನಗಳ ಹಿಂದೆ ಇನ್ನೊಂದು ಹುಲಿಯೊಂದಿಗೆ ಕಾದಾಟ ನಡೆಸಿ ಸತ್ತಿರಬಹುದೆಂದು ಶಂಕಿ
ಸಲಾಗಿದೆ. ಹುಲಿಯ ಕಳೇಬರವನ್ನು ದಹಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT