ADVERTISEMENT

ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಶಸ್ತ್ರಚಿಕಿತ್ಸೆಗೆ ನೆರವು

​ಪ್ರಜಾವಾಣಿ ವಾರ್ತೆ
Published 3 ಜನವರಿ 2012, 19:30 IST
Last Updated 3 ಜನವರಿ 2012, 19:30 IST

ಬೆಂಗಳೂರು: ಅಮರನಾಥ ಎಂಬ ಬಾಲಕನ ಮೂತ್ರಪಿಂಡದ ಶಸ್ತ್ರಚಿಕಿತ್ಸೆಯ ವೆಚ್ಚವನ್ನು ಡಿ.ವಿ. ಸದಾನಂದ ಗೌಡ ಅವರು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ನೀಡಲಿದ್ದಾರೆ.

ಹುಬ್ಬಳ್ಳಿ ಮೂಲದ ಬಾಲಕ ಅಮರನಾಥನ ಮೂತ್ರಪಿಂಡಗಳು ವಿಫಲಗೊಂಡಿವೆ. ಈ ಹಿನ್ನೆಲೆಯಲ್ಲಿ ಆತನ ತಾಯಿ ತನ್ನ ಒಂದು ಮೂತ್ರಪಿಂಡವನ್ನು ಅಮರನಾಥನಿಗೆ ನೀಡಲು ಮುಂದಾಗಿದ್ದರು. ಆದರೆ ಬಡ ಕುಟುಂಬದ ಅವರಿಗೆ ಮೂತ್ರಪಿಂಡ ಬದಲಿಸುವ ಶಸ್ತ್ರಚಿಕಿತ್ಸೆಗೆ ಬೇಕಾದ ಹಣ ಹೊಂದಿಸುವ ಸಾಮರ್ಥ್ಯ ಇರಲಿಲ್ಲ.

ಈ ವಿಷಯ ತಿಳಿದ ಸದಾನಂದ ಗೌಡರು ಶಸ್ತ್ರಚಿಕಿತ್ಸೆಯ ಹಣವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಭರಿಸುವುದಾಗಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.