ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಜ್ವರದಿಂದ ಬಳಲಿದ್ದರಿಂದ ಸೋಮವಾರ ಪೂರ್ವ ನಿಯೋಜಿತ ಕೆಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿಲ್ಲ.
ಕಳೆದ ಎಂಟರಿಂದ ಹತ್ತು ದಿನಗಳಿಂದ ನಿರಂತರ ಪ್ರವಾಸದಲ್ಲಿದ್ದ ಕಾರಣ ನಿಶ್ಯಕ್ತಿಯಿಂದಾಗಿ ಜ್ವರ ಬಂದಿತ್ತು. ಸಂಪೂರ್ಣ ವಿಶ್ರಾಂತಿ ತೆಗೆದುಕೊಳ್ಳಬೇಕು ಎಂದು ವೈದ್ಯರು ಸಲಹೆ ನೀಡಿದ್ದರೂ, ಕೆಲವು ಕಾರ್ಯಕ್ರಮಗಳನ್ನು ಬಿಟ್ಟು ಉಳಿದ ಸಮಾರಂಭಗಳಲ್ಲಿ ಅರ್ಧ ಗಂಟೆ ಇದ್ದರು ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ.
ಮಂಗಳವಾರ ಅವರು ಮೈಸೂರಿಗೆ ಹೋಗಲಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.