ಕೆ.ಆರ್.ಪೇಟೆ: ತಾಲ್ಲೂಕಿನ ಕಳ್ಳನಕೆರೆ ಗ್ರಾಮದಲ್ಲಿ ಗುರುವಾರ ಕಬ್ಬು ಕಟಾವು ಮಾಡುತ್ತಿದ್ದಾಗ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.
ಗ್ರಾಮದ ರೈತ ದೇವರಾಜು ಅವರು ಜಮೀನಿನಲ್ಲಿ ಕಬ್ಬು ಕಟಾವು ಮಾಡಿಸುತ್ತಿದ್ದಾಗ ಒಂದರಿಂದ ಒಂದೂವರೆ ತಿಂಗಳ ಚಿರತೆ ಮರಿಗಳು ಕಂಡು ಬಂದವು. ತಕ್ಷಣ ಅರಣ್ಯ ಇಲಾಖೆ ಹಾಗೂ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆ ಮರಿಗಳನ್ನು ವಶಕ್ಕೆ ತೆಗೆದುಕೊಂಡರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.