
ಪ್ರಜಾವಾಣಿ ವಾರ್ತೆಬೆಂಗಳೂರು: ಮೂವರು ಕೆ.ಎ.ಎಸ್ ಅಧಿಕಾರಿಗಳನ್ನು ಆಯ್ಕೆ ಶ್ರೇಣಿಗೆ ಬಡ್ತಿ ನೀಡಿ ರಾಜ್ಯ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ.
ಬಡ್ತಿ ಹೊಂದಿದ ಅಧಿಕಾರಿಗಳನ್ನು ಈಗಿರುವ ಹುದ್ದೆಗಳಲ್ಲೇ ಮುಂದುವರಿಸಲಾಗಿದೆ.
ಎಸ್.ಎನ್.ಗಂಗಾಧರಯ್ಯ- ವಿಶೇಷ ಜಿಲ್ಲಾಧಿಕಾರಿ, ಬೆಂಗಳೂರು ಉತ್ತರ ತಾಲ್ಲೂಕು ಮತ್ತು ಬೆಂಗಳೂರು ಉತ್ತರ (ಹೆಚ್ಚುವರಿ) ತಾಲ್ಲೂಕು.
ಕೆ.ಎಸ್.ಮಂಜುನಾಥ್- ಮುಖ್ಯ ಆಡಳಿತಾಧಿಕಾರಿ ಮತ್ತು ಜಾಗೃತಾಧಿಕಾರಿ, ಮೈಸೂರು ಮಿನರಲ್ಸ್ ಲಿಮಿಟೆಡ್, ಬೆಂಗಳೂರು.
ಕೆ.ಸುಬ್ರಾಯ ಕಾಮತ್- ಜಂಟಿ ಕಾರ್ಯದರ್ಶಿ, ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ, ಬೆಂಗಳೂರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.