ADVERTISEMENT

ಮೂವರು ಮಕ್ಕಳು ಜಲಸಮಾಧಿ

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2013, 19:59 IST
Last Updated 15 ಸೆಪ್ಟೆಂಬರ್ 2013, 19:59 IST

ಚಿಕ್ಕಜಾಜೂರು: ದನಗಳಿಗೆ ನೀರು ಕುಡಿಸಲು ಹೋಗಿ ಹೊಂಡದಲ್ಲಿ ಮುಳುಗಿ ಮೂವರು ಮಕ್ಕಳು ಮೃತ­ಪಟ್ಟ ಘಟನೆ ಭಾನುವಾರ ನಡೆದಿದೆ.

ಸಮೀಪದ ಬೊಂಡೆಬೊಮ್ಮೆನಹಳ್ಳಿ ವಡ್ಡರಹಟ್ಟಿ ಗ್ರಾಮದ ಕಾರ್ಮಿಕ ಮಂಜಪ್ಪ ಅವರ ಪುತ್ರ ಅಭಿಷೇಕ್‌ (12), ಲಕ್ಷ್ಮಣ ಅವರ ಪುತ್ರ ದರ್ಶನ್‌ (12) ಮತ್ತು ತಿಮ್ಮಪ್ಪ ಅವರ ಪುತ್ರ ಸಾಗರ್‌ (11)  ಮೃತಪಟ್ಟವರು.

ಭಾನುವಾರ ರಜಾ ದಿನವಾಗಿದ್ದರಿಂದ ದನಗಳನ್ನು ಮೇಯಿಸಲು ಹೋಗಿದ್ದರು. ಗೋಮಾಳದಲ್ಲಿದ್ದ ಗುಂಡಿಯಲ್ಲಿ ದನಗಳಿಗೆ ನೀರು ಕುಡಿಸಲು ಹೋದಾಗ ಈ ದುರ್ಘಟನೆ ಸಂಭವಿಸಿದೆ. ಈ ಮಕ್ಕಳೆಲ್ಲರೂ 5ನೇ ತರಗತಿಯ ವಿದ್ಯಾರ್ಥಿಗಳು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.