ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯ ಮತದಾನ ನಡೆಯುವ ಮೇ 12ರಂದು ಸರ್ಕಾರ ಸಾರ್ವತ್ರಿಕ ರಜೆ ಘೋಷಿಸಿದೆ.
ರಾಜ್ಯದ ಎಲ್ಲ ಸ್ಥಳೀಯ ಸಂಸ್ಥೆಗಳು, ಬ್ಯಾಂಕುಗಳು ಮತ್ತು ಕಚೇರಿಗಳಿಗೆ ಸರ್ಕಾರ ರಜೆ ಘೋಷಿಸಿದೆ. ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಎಲ್ಲ ಕಾರ್ಮಿಕರು ಅಂದು ವೇತನ ಸಹಿತ ರಜೆಗೆ ಅರ್ಹರಿರುತ್ತಾರೆ ಎಂದು ಸರ್ಕಾರದ ಅಧಿಸೂಚನೆ ತಿಳಿಸಿದೆ.
'ನೆಗೊಷಿಯಬಲ್ ಇನ್ಸ್ಟ್ರುಮೆಂಟ್ ಆಕ್ಟ್' ಪ್ರಕಾರ ಸರ್ಕಾರದ ಅಧೀನ ಕಾರ್ಯದರ್ಶಿ ಡಾ.ನಂಜುಂಡೇಗೌಡ ಅಧಿಸೂಚನೆ ಹೊರಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.