ADVERTISEMENT

ಮೊಮ್ಮಗನಿಂದಲೇ ಅಜ್ಜನ ಕೊಲೆ

​ಪ್ರಜಾವಾಣಿ ವಾರ್ತೆ
Published 10 ಮೇ 2018, 20:26 IST
Last Updated 10 ಮೇ 2018, 20:26 IST

ಶಿವಮೊಗ್ಗ: ಬುದ್ಧಿವಾದ ಹೇಳಿದ್ದಕ್ಕೆ ಮೊಮ್ಮಗನೇ ಅಜ್ಜನನ್ನು ಸಾಗರ ತಾಲ್ಲೂಕಿನ ಕೆಳದಿ ಗ್ರಾಮದಲ್ಲಿ ಬುಧವಾರ ರಾತ್ರಿ ಕೊಲೆ ಮಾಡಿದ್ದಾನೆ.

ರಾಮರಾವ್ (72) ಕೊಲೆಯಾದ ವ್ಯಕ್ತಿ. ಮೊಮ್ಮಗ ಸಾತ್ವಿಕ್ ಮದ್ಯ ವ್ಯಸನಿಯಾಗಿದ್ದ. ಅದರಿಂದ ಹೊರಬರುವಂತೆ ಅಜ್ಜ ಬುದ್ಧಿವಾದ ಹೇಳಿದ್ದಕ್ಕೆ ಕೋಪಗೊಂಡ ಸಾತ್ವಿಕ್ ಅಜ್ಜನ ಮೇಲೆ ಹಲ್ಲೆ ನಡೆಸಿದ್ದು, ಇದರಿಂದ ತೀವ್ರವಾಗಿ ಗಾಯಗೊಂಡ ಅವರು ಸಾವನ್ನಪ್ಪಿದ್ದಾರೆ.

ಸಾತ್ವಿಕ್‌ನನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.