ಬೆಂಗಳೂರು: ವರುಣಾ ಕ್ಷೇತ್ರದ ಶಾಸಕ ಡಾ. ಯತೀಂದ್ರ ಅವರಿಗೆ ಸಚಿವ ಸ್ಥಾನ ನೀಡುವಂತೆ ಬೆಂಬಲಿಗರು, ಕಾಂಗ್ರೆಸ್ ಕಾರ್ಯಕರ್ತರು ಆಗ್ರಹಿಸಿದ್ದಾರೆ.
ಕಾಂಗ್ರೆಸ್ನ ಹಿರಿಯ ಮುಖಂಡ ಮತ್ತು ಯತೀಂದ್ರ ಅವರ ತಂದೆ ಸಿದ್ದರಾಮಯ್ಯ ಅವರನ್ನು ಮಂಗಳವಾರ ಭೇಟಿ ಮಾಡಿದ ಕಾರ್ಯಕರ್ತರ ಗುಂಪು ಈ ಬೇಡಿಕೆ ಇಟ್ಟಿದೆ.
ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ‘ಈ ವಿಷಯದಲ್ಲಿ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದ್ದು, ನಾನು ಒತ್ತಡ ಹೇರಲು ಆಗುವುದಿಲ್ಲ’ ಎಂದು ಹೇಳಿದ್ದಾಗಿ ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.