ADVERTISEMENT

ಯದುವೀರ–ತ್ರಿಷಿಕಾ ಪುತ್ರನ ನಾಮಕರಣ

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2018, 19:30 IST
Last Updated 25 ಫೆಬ್ರುವರಿ 2018, 19:30 IST
ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌–ತ್ರಿಷಿಕಾ ಕುಮಾರಿ ಅವರ ಪುತ್ರನಿಗೆ ಆದ್ಯವೀರ್‌ ನರಸಿಂಹರಾಜ ಒಡೆಯರ್‌ ಎಂದು ನಾಮಕರಣ ಮಾಡಲಾಯಿತು. ಪ್ರಮೋದಾದೇವಿ ಒಡೆಯರ್‌ ಇದ್ದಾರೆ
ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌–ತ್ರಿಷಿಕಾ ಕುಮಾರಿ ಅವರ ಪುತ್ರನಿಗೆ ಆದ್ಯವೀರ್‌ ನರಸಿಂಹರಾಜ ಒಡೆಯರ್‌ ಎಂದು ನಾಮಕರಣ ಮಾಡಲಾಯಿತು. ಪ್ರಮೋದಾದೇವಿ ಒಡೆಯರ್‌ ಇದ್ದಾರೆ   

ಮೈಸೂರು: ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಹಾಗೂ ತ್ರಿಷಿಕಾ ಕುಮಾರಿ ಅವರ ಪುತ್ರನಿಗೆ ಆದ್ಯವೀರ್‌ ನರಸಿಂಹರಾಜ ಒಡೆಯರ್‌ ಎಂದು ನಾಮಕರಣ ಮಾಡಲಾಗಿದೆ.

ಬೆಂಗಳೂರಿನ ಅರಮನೆಯಲ್ಲಿ ಭಾನುವಾರ ನಾಮಕರಣ ಶಾಸ್ತ್ರ ನೆರವೇರಿತು. ಈ ವಿಚಾರವನ್ನು ಯದುವೀರ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ‘ಕುಲದೇವತೆ ಚಾಮುಂಡೇಶ್ವರಿ ಅಮ್ಮನವರ ಆಶೀರ್ವಾದದಿಂದ ಪುತ್ರನ ನಾಮಕರಣ ಪದ್ಧತಿಯ ಪ್ರಕಾರ ನಡೆಯಿತು’ ಎಂದಿದ್ದಾರೆ.

ಪ್ರಮೋದಾದೇವಿ ಒಡೆಯರ್‌ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ತ್ರಿಷಿಕಾ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಡಿ.6ರಂದು ಗಂಡು ಮಗುವಿಗೆ ಜನ್ಮ ನೀಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.