ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ಯರಬಳ್ಳಿ ಗ್ರಾಮ ಪಂಚಾಯ್ತಿ ಕಚೇರಿಗೆ ಮಂಗಳವಾರ ಬೆಂಕಿ ಬಿದ್ದಿದ್ದು ಅನೇಕ ಕಡತಗಳು ಸುಟ್ಟು ಹೋಗಿವೆ.
ಕಿಡಿಗೇಡಿಗಳು ಈ ಕೃತ್ಯ ಎಸಗಿರಬಹುದೆಂದು ಅಧಿಕಾರಿಗಳು ಶಂಕಿಸಿದ್ದಾರೆ. ಹಲವು ಪ್ರಮುಖ ದಾಖಲೆಗಳು ಬೆಂಕಿಗೆ ಸುಟ್ಟು ಭಸ್ಮವಾಗಿವೆ.
ಈ ಹಿಂದೆಯೂ ಒಮ್ಮೆ ಗ್ರಾಮ ಪಂಚಾಯತಿ ಕಟ್ಟಡದ ಒಳ ಭಾಗಕ್ಕೆ ಬೆಂಕಿ ಬಿದ್ದು ದಾಖಲೆಗಳು ಸುಟ್ಟು ಹೋಗಿದ್ದವು.
ಘಟನೆಯಿಂದಾಗಿ ಗ್ರಾಮ ಪಂಚಾಯಯ್ತಿ ಸದಸ್ಯರು ಆತಂಕಗೊಂಡಿದ್ದಾರೆ.
ಈ ಗ್ರಾಮ ಪಂಚಾಯ್ತಿಯಲ್ಲಿ ಅಕ್ರಮ ನಡೆದಿರುವ ಕುರಿತು ದೂರುಗಳು ಕೇಳಿಬರುತ್ತಿದ್ದವು ಎಂದು ಸ್ಥಳೀಯರು ತಿಳಿಸಿದ್ದಾರೆ.
ಸದ್ಯ ಸ್ಥಳಕ್ಕೆ ಐಮಂಗಲ ಪೊಲೀಸರು ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.