ಬೆಂಗಳೂರು: ‘ಚನ್ನಪಟ್ಟಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಸಿ.ಪಿ. ಯೋಗೇಶ್ವರ ಜೆಡಿಎಸ್ ಸೇರುವ ವಿಷಯ ಉಹಾಪೋಹ’ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.
‘ಯೋಗೇಶ್ವರ ಜೊತೆ ನಾನು ಮಾತುಕತೆ ನಡೆಸಿಲ್ಲ. ಅವರನ್ನು ಭೇಟಿಯೂ ಮಾಡಿಲ್ಲ. ಮದ್ದೂರು ಕ್ಷೇತ್ರದಿಂದ ಅವರು ಜೆಡಿಎಸ್ನಿಂದ ಕಣಕ್ಕಿಳಿಯಲಿದ್ದಾರೆ ಎಂಬ ಸುದ್ದಿಯೂ ಸುಳ್ಳು. ಚುನಾವಣೆ ಸಂದರ್ಭದಲ್ಲಿ ಇಂತಹ ವದಂತಿ ಸಹಜ’ ಎಂದೂ ಕುಮಾರಸ್ವಾಮಿ ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.