ಬೆಂಗಳೂರು: ಡಾ.ರಾಜ್ಕುಮಾರ್ ಅವರ ಸೋದರ ಎಸ್.ಪಿ.ವರದರಾಜು ಅವರ ಹೆಸರಿನಲ್ಲಿ ಸ್ಥಾಪಿಸಲಾಗಿರುವ `ಎಸ್.ಪಿ.ವರದರಾಜು ಪ್ರಶಸ್ತಿ~ ಗೆ ಈ ಬಾರಿ ರಂಗಭೂಮಿ ಕ್ಷೇತ್ರದ ಕೊಡುಗೆಗಾಗಿ ಹಿರಿಯ ರಂಗನಟಿ ರಂಗನಾಯಕಮ್ಮ ಹಾಗೂ ಚಲನಚಿತ್ರ ಕ್ಷೇತ್ರದ ಕಲಾ ಸೇವೆಗಾಗಿ ಪೋಷಕ ನಟ ಅಶ್ವತ್ಥನಾರಾಯಣ ಅವರನ್ನು ಆಯ್ಕೆಮಾಡಲಾಗಿದೆ.
ಎಸ್.ಪಿ.ವರದರಾಜು ಆತ್ಮೀಯರ ಬಳಗವು ಇದೇ 28 ರ ಸಂಜೆ 6 ಗಂಟೆಗೆ ನಗರದ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಆಯೋಜಿಸಿರುವ ಸಮಾರಂಭದಲ್ಲಿ ಚಲನಚಿತ್ರ ನಟ ಅಂಬರೀಷ್ ಅವರು ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದಾರೆ.
ಸಮಾರಂಭದ ವಿಶೇಷ ಅತಿಥಿಯಾಗಿ ಡಾ.ರಾಜ್ಕುಮಾರ್ ಅವರ ಸೋದರಿ ಎಸ್.ಪಿ.ನಾಗಮ್ಮ ಪಾಲ್ಗೊಳ್ಳಲಿದ್ದಾರೆ. ಹಿರಿಯ ಸಾಹಿತಿ ಡಾ.ಬರಗೂರು ರಾಮಚಂದ್ರಪ್ಪ ಆಶಯ ನುಡಿಗಳನ್ನಾಡಲಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.