
ಪ್ರಜಾವಾಣಿ ವಾರ್ತೆ
ಬಳ್ಳಾರಿ: ಇಲ್ಲಿನ ಮಾಹಿತಿ ಹಕ್ಕು ಕಾರ್ಯಕರ್ತ ರಾಜಶೇಖರ ಮುಲಾಲಿ ಅವರ ಮನೆಗೆ ಮಾಜಿ ಸೈನಿಕರು ಭದ್ರತೆ ಒದಗಿಸಿದ್ದಾರೆ.
ಎಚ್. ವೈ.ಮೇಟಿ ಅವರ ಕಾಮಕೇಳಿ ಪ್ರಕರಣ ಬೆಳಕಿಗೆ ತಂದಿರುವ ಮುಲಾಲಿ ಅವರು ತಮಗೆ ಪ್ರಾಣ ಬೆದರಿಕೆ ಇರುವುದಾಗಿ ಕೆಲವು ದಿನಗಳ ಹಿಂದೆ ಗಾಂಧಿನಗರ ಠಾಣೆಗೆ ದೂರು ನೀಡಿದ್ದರು.
ಬಳ್ಳಾರಿಯ ಕೆಎಂಎಫ್ ಡೈರಿಯ ಬಳಿ ಇರುವ ರಾಜಶೇಖರ್ ಮನೆಗೆ ಮಾಜಿ ಸೈನಿಕರ ಸಂಘದ ವತಿಯಿಂದ ಸ್ವಯಂ ಪ್ರೇರಿತವಾಗಿ ಭದ್ರತೆ ಒದಗಿಸಿದ್ದು, 20ಕ್ಕೂ ಹೆಚ್ಚು ಮಾಜಿ ಸೈನಿಕರು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.