ADVERTISEMENT

ರಾಜಾಪುರ ಬ್ಯಾರೆಜ್‌ನಿಂದ 1.35 ಲಕ್ಷ ಕ್ಯೂಸೆಕ್ ನೀರು ಹೊರಕ್ಕೆ

ಮೈದುಂಬಿ ಹರಿಯುತ್ತಿರುವ ಕೃಷ್ಣಾ, ಉಪ ನದಿಗಳು

​ಪ್ರಜಾವಾಣಿ ವಾರ್ತೆ
Published 6 ಆಗಸ್ಟ್ 2016, 9:42 IST
Last Updated 6 ಆಗಸ್ಟ್ 2016, 9:42 IST
ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಸುಕ್ಷೇತ್ರ ನರಸಿಂಹವಾಡಿಯ ದತ್ತ ಮಂದಿರ ಕ್ರಷ್ಣಾ ಮತ್ತು ಪಂಚಗಂಗಾ ನದಿ ಸಂಗಮ ಸ್ಥಾನದಲ್ಲಿ ಮುಳುಗಡೆಯಾಗಿದೆ.
ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಸುಕ್ಷೇತ್ರ ನರಸಿಂಹವಾಡಿಯ ದತ್ತ ಮಂದಿರ ಕ್ರಷ್ಣಾ ಮತ್ತು ಪಂಚಗಂಗಾ ನದಿ ಸಂಗಮ ಸ್ಥಾನದಲ್ಲಿ ಮುಳುಗಡೆಯಾಗಿದೆ.   

ಬೆಳಗಾವಿ: ಮಹಾರಾಷ್ಟ್ರದ ರಾಜಾಪುರ ಬ್ಯಾರೆಜ್ ನಿಂದ 1.35 ಲಕ್ಷ ಕ್ಯೂಸೆಕ್ ನೀರು ಹೊರ ಬಿಡಲಾಗಿದೆ. ಕಣೇರಿ, ವಾರಣಾ, ರಾಧಾನಗರಿ ಜಲಾಶಯದಿಂದ ನೀರು ಹೊರಬಿಡಲಾದ್ದು, ಬೆಳಗಾವಿ ಜಿಲ್ಲೆಯಲ್ಲಿ ಹರಿಯುವ ಕೃಷ್ಣಾ ಹಾಗೂ ಉಪ ನದಿಗಳ ಹರಿವು ಶನಿವಾರ ಹೆಚ್ಚಳವಾಗಿದೆ.

ಕಣೇರಿ ಜಲಾಶಯದಿಂದ 9,572 ಕ್ಯುಸೆಕ್, ವಾರಣಾ ಜಲಾಶಯದಿಂದ 21,200 ಕ್ಯೂಸೆಕ್, ರಾಧಾನಗರಿ ಜಲಾಶಯದಿಂದ 12,196 ಕ್ಯೂಸೆಕ್ ಹೊರಬಿಡಲಾಗಿದೆ. ಇದರಿಂದಾಗಿ ಬೆಳಗಾವಿ ಜಿಲ್ಲೆಯಲ್ಲಿ ಕೃಷ್ಣಾ ಹಾಗೂ ಉಪ ನದಿಗಳು ಮೈದುಂಬಿ ಹರಿಯುತ್ತಿವೆ. ಬೆಳಗಾವಿ, ಖಾನಾಪುರ, ಅಥಣಿಯಲ್ಲಿ ಮಳೆ ಮುಂದುವರಿದಿದೆ.

ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಸುಕ್ಷೇತ್ರ ನರಸಿಂಹವಾಡಿಯ ದತ್ತ ಮಂದಿರ ಕ್ರಷ್ಣಾ ಮತ್ತು ಪಂಚಗಂಗಾ ನದಿ ಸಂಗಮ ಸ್ಥಾನದಲ್ಲಿ ಮುಳುಗಡೆಯಾಗಿದೆ. ಚಿಕ್ಕೋಡಿ ಬಳಿ ಕೃಷ್ಣಾ ನದಿ ತುಂಬಿ ಹರಿಯುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.