ADVERTISEMENT

ರಾಜೀನಾಮೆ ಅಂಗೀಕರಿಸಿ

​ಪ್ರಜಾವಾಣಿ ವಾರ್ತೆ
Published 10 ಸೆಪ್ಟೆಂಬರ್ 2011, 19:30 IST
Last Updated 10 ಸೆಪ್ಟೆಂಬರ್ 2011, 19:30 IST

ಬಳ್ಳಾರಿ: ಶಾಸಕ ಸ್ಥಾನಕ್ಕೆ ಇತ್ತೀಚೆಗೆ ಸಲ್ಲಿಸಿರುವ ತಮ್ಮ ರಾಜೀನಾಮೆಯನ್ನು ಅಂಗೀಕರಿಸುವಂತೆ ವಿಧಾನಸಭಾಧ್ಯಕ್ಷ ಬೋಪಯ್ಯ ಅವರಿಗೆ ಮನವಿ ಮಾಡುವುದಾಗಿ ಬಿ.ಶ್ರೀರಾಮುಲು ತಿಳಿಸಿದ್ದಾರೆ.

ನಗರದಲ್ಲಿ ಶನಿವಾರ ಸಂಜೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೋಪಯ್ಯ ಅವರು ನಿಯಮಾನುಸಾರ ರಾಜೀನಾಮೆಯನ್ನು ಅಂಗೀಕರಿಸುವರು ಎಂಬ ವಿಶ್ವಾಸವಿದೆ ಎಂದರು.

ರಾಜೀನಾಮೆ ನೀಡಿರುವುದಕ್ಕೆ ಬೋಪಯ್ಯ ಅವರು ಕಾರಣ ಕೇಳಿದ್ದು, ಕಾನೂನು ತಜ್ಞರು ಮತ್ತು ಸ್ನೇಹಿತರೊಂದಿಗೆ ಚರ್ಚಿಸಿ ಸೂಕ್ತ ದಾಖಲೆಗಳೊಂದಿಗೆ ಶೀಘ್ರವೇ ಅವರನ್ನು ಭೇಟಿ ಮಾಡಿ, ಸ್ಪಷ್ಟನೆ ನೀಡಿ ರಾಜೀನಾಮೆ ಅಂಗೀಕರಿಸುವಂತೆ ಮನವಿ ಮಾಡುವುದಾಗಿ ಅವರು ವಿವರಿಸಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.