ADVERTISEMENT

ರಾಜೀನಾಮೆ ಹಿಂದಕ್ಕೆ ಪಡೆದ 9 ಭಿನ್ನಮತೀಯ ಸಚಿವರು

​ಪ್ರಜಾವಾಣಿ ವಾರ್ತೆ
Published 2 ಜುಲೈ 2012, 5:50 IST
Last Updated 2 ಜುಲೈ 2012, 5:50 IST

ಬೆಂಗಳೂರು: ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರನ್ನು ಬದಲಾಯಿಸಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟುಕೊಂಡು ಶುಕ್ರವಾರ ರಾಜೀನಾಮೆ ನೀಡಿದ್ದ ಯಡಿಯೂರಪ್ಪ ಬಣದ 9 ಮಂದಿ ಸಚಿವರು ಸೋಮವಾರ ತಮ್ಮ ರಾಜೀನಾಮೆಗಳನ್ನು ಹಿಂಪಡೆದಿದ್ದಾರೆ.

ಸಂಪುಟದ 9 ಮಂದಿ ಸಚಿವರು ರಾಜೀನಾಮೆ ಪತ್ರಗಳನ್ನು ಮುಖ್ಯಮಂತ್ರಿಗೆ ಸ್ವತಃ ಸಲ್ಲಿಸಿದ್ದರು. ಲೋಕೋಪಯೋಗಿ ಸಚಿವ ಸಿ.ಎಂ.ಉದಾಸಿ ಅವರ ನೇತೃತ್ವದಲ್ಲಿ ರಾಜೀನಾಮೆ ನೀಡಿದ್ದ ಸಚಿವರು, ನಂತರ ಅದನ್ನು ಸ್ವೀಕರಿಸದಂತೆ ಮುಖ್ಯಮಂತ್ರಿಗೆ ಮನವಿ ಮಾಡಿಕೊಂಡಿದ್ದರು ಎಂದು ವರದಿಯಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT