
ಪ್ರಜಾವಾಣಿ ವಾರ್ತೆ ಬೆಂಗಳೂರು: ಸೋಮವಾರ ಬೆಳಿಗ್ಗೆ 8.30 ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದ ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಒಣಹವೆ ಮುಂದುವರೆದಿದೆ.
ಕಿರವತ್ತಿ (ಉತ್ತರ ಕನ್ನಡ ಜಿಲ್ಲೆ), ನಾಪೋಕ್ಲು, ಅಮ್ಮತಿ ತಲಾ 2 ಸೆ.ಮಿ, ಕದ್ರಾ (ಉತ್ತರ ಕನ್ನಡ ಜಿಲ್ಲೆ), ಕಲಘಟಗಿ (ಧಾರವಾಡ ಜಿಲ್ಲೆ), ವೀರಾಜಪೇಟೆ, ಕೊಟ್ಟಿಗೆಹಾರದಲ್ಲಿ ತಲಾ 1 ಸೆ.ಮೀ ಮಳೆಯಾಗಿದೆ. ಬೀದರ್ನಲ್ಲಿ ಗರಿಷ್ಠ ಉಷ್ಣಾಂಶ 39.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಮುನ್ಸೂಚನೆ: ಮುಂದಿನ 48 ಗಂಟೆಗಳ ಕಾಲ ರಾಜ್ಯದಲ್ಲಿ ಅಲ್ಲಲ್ಲಿ ತುಂತುರು ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.