ADVERTISEMENT

ರಾಜ್ಯದಲ್ಲಿ ನೈರುತ್ಯ ಮುಂಗಾರು ಕ್ಷೀಣ

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2013, 19:59 IST
Last Updated 6 ಸೆಪ್ಟೆಂಬರ್ 2013, 19:59 IST

ಬೆಂಗಳೂರು: ಶುಕ್ರವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದ ಕರಾವಳಿ, ಉತ್ತರ ಒಳನಾಡಿನಲ್ಲಿ ನೈರುತ್ಯ ಮುಂಗಾರು ಕ್ಷೀಣಿಸಿದೆ. ಕರಾವಳಿಯ ಹಲವು ಪ್ರದೇಶಗಳು, ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಮಳೆಯಾಗಿದೆ.

ಸುಳ್ಯದಲ್ಲಿ 6 ಸೆಂ.ಮೀ. ಮಳೆಯಾಗಿದೆ. ತಿ.ನರಸೀಪುರ, ಮಂಡ್ಯ, ಹೊಸಕೋಟೆ 4, ಭಾಗಮಂಡಲ, ಪಂಚನಹಳ್ಳಿ, ಬೆಳ್ಳೂರು, ಮಳವಳ್ಳಿ, ಮಾಗಡಿ 3, ಬೆಳ್ತಂಗಡಿ, ಧರ್ಮಸ್ಥಳ, ಕೆರೂರು, ಭದ್ರಾವತಿ, ಮೂಡಿಗೆರೆ, ತರಿಕೆರೆ, ಅರಸಿಕೆರೆ, ನುಗ್ಗೆಹಳ್ಳಿ, ಕೊಳ್ಳೆಗಾಲ, ಮಹದೇಶ್ವರ ಬೆಟ್ಟ, ಕೆ.ಆರ್.ಪೇಟೆ, ರಾಯಲ್ಪಾಡು, ಚಿಕ್ಕನಾಯಕನಹಳ್ಳಿ, ಚಿಕ್ಕನಹಳ್ಳಿ, ಶಿರಾ 2, ಮೂಡುಬಿದಿರೆ, ಪುತ್ತೂರು, ಸುಬ್ರಹ್ಮಣ್ಯ, ಕೊಲ್ಲೂರು, ಕಾರವಾರ, ಕಿರವತ್ತಿ, ಕ್ಯಾಸಲ್‌ರಾಕ್, ಹಿರೇಕೆರೂರು, ಲಕ್ಷ್ಮೇಶ್ವರದಲ್ಲಿ  ತಲಾ 1 ಸೆಂ.ಮೀ.ಮಳೆಯಾಗಿದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.