ADVERTISEMENT

ರಾಜ್ಯದಲ್ಲಿ ಮೋದಿ ಭಾಷಣಕ್ಕೆ ರೂ 10 ಶುಲ್ಕ

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2013, 19:59 IST
Last Updated 19 ಸೆಪ್ಟೆಂಬರ್ 2013, 19:59 IST

ಬೆಂಗಳೂರು: ಬಿಜೆಪಿಯ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರು ದಸರಾ ನಂತರ (ಅಕ್ಟೋಬರ್‌ ಕೊನೆ ವಾರ) ನಗರಕ್ಕೆ ಬರುತ್ತಿದ್ದು ಆ ಸಂದರ್ಭದಲ್ಲಿ  ಯುವಕರ ಸಮಾವೇಶವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಬೆಂಗಳೂರಿನಲ್ಲಿಯೇ ಕಾರ್ಯಕ್ರಮ ನಡೆಯಲಿದೆ. ಸಮಾವೇಶಕ್ಕೆ ಬರುವ ಪ್ರತಿಯೊಬ್ಬರಿಂದ 10 ರೂಪಾಯಿ ಪ್ರವೇಶ ಶುಲ್ಕ ಸಂಗ್ರಹಿಸುವುದು ಮತ್ತು ಹತ್ತು ಲಕ್ಷ ಯುವಕರನ್ನು ಸೇರಿಸುವುದು ನಮ್ಮ ಉದ್ದೇಶ ಎಂದು ಬಿಜೆಪಿಯ ಹಿರಿಯ ಮುಖಂಡರೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.