ADVERTISEMENT

ರಾಜ್ಯದ ಒಳನಾಡಿನಲ್ಲಿ ಮಳೆ

​ಪ್ರಜಾವಾಣಿ ವಾರ್ತೆ
Published 2 ಏಪ್ರಿಲ್ 2013, 19:59 IST
Last Updated 2 ಏಪ್ರಿಲ್ 2013, 19:59 IST

ಬೆಂಗಳೂರು: ಮಂಗಳವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದ ಒಳನಾಡಿನಲ್ಲಿ ಮಳೆಯಾಗಿದೆ. ಕರಾವಳಿಯಲ್ಲಿ ಒಣಹವೆ ಮುಂದುವರೆದಿದೆ.

ಗುಂಡ್ಲುಪೇಟೆ 5, ಹುಣಸೂರು 3, ಚನ್ನರಾಯಪಟ್ಟಣ, ಮಿಡಿಗೇಶಿ 2, ಪಾವಗಡ, ಆನೇಕಲ್‌ನಲ್ಲಿ ತಲಾ ಒಂದು ಸೆಂ.ಮೀ. ಮಳೆಯಾಗಿದೆ. ಗುಲ್ಬರ್ಗದಲ್ಲಿ ಗರಿಷ್ಠ ಉಷ್ಣಾಂಶ 40.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಮುನ್ಸೂಚನೆ: ಮುಂದಿನ 48 ಗಂಟೆಗಳಲ್ಲಿ ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.