ದಾವಣಗೆರೆ: ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯಲಿರುವ ಚುನಾವಣೆಯಲ್ಲಿ ಮೂರು ಸ್ಥಾನಗಳನ್ನು ನಾವೇ ಗೆಲ್ಲಲಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.
ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರವಾಗಿ ಇದೇ 14ರಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು. ಪ್ರತಿಭಟನೆ ಪ್ರಜಾಪ್ರಭುತ್ವದ ಜೀವಾಳ. ಸ್ವಾಮೀಜಿಗಳು ಅವರವರ ಅಭಿಪ್ರಾಯಗಳಿಗೆ ಸ್ವತಂತ್ರರು ಎಂದು ಅವರು ಹೇಳಿದರು.
ವಿಧಾನಸಭಾ ಸಚಿವಾಲಯಕ್ಕೆ ಸಿಬ್ಬಂದಿ ನೇಮಕ ಸರ್ಕಾರ ಮಾಡುವುದಲ್ಲ. ಅದು ನಮಗೆ ಸಂಬಂಧಿಸಿಲ್ಲ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದರು.
ಪೊಲೀಸ್ ಇಲಾಖೆ ಅಧಿಕಾರಿಗಳ ವರ್ಗಾವಣೆ ಆಡಳಿತ್ಮಾಕ ವಿಚಾರ. ಆ ಕುರಿತು ಬಹಿರಂಗವಾಗಿ ಚರ್ಚಿಸುವುದಿಲ್ಲ ಎಂದೂ ಸಿದ್ದರಾಮಯ್ಯ ಹೇಳಿದರು.
ಇನ್ನಷ್ಟು...
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.