ADVERTISEMENT

ರಾಜ್ಯ ಸರ್ಕಾರ ಕೃಪಾಪೋಷಿತ ಭಯೋತ್ಪಾದನೆ ವಿರೋಧಿಸಿ 'ಜೈಲ್‌ ಭರೋ': ಸಚಿವ ಅನಂತಕುಮಾರ ಹೆಗಡೆ

​ಪ್ರಜಾವಾಣಿ ವಾರ್ತೆ
Published 14 ಡಿಸೆಂಬರ್ 2017, 7:06 IST
Last Updated 14 ಡಿಸೆಂಬರ್ 2017, 7:06 IST
ರಾಜ್ಯ ಸರ್ಕಾರ ಕೃಪಾಪೋಷಿತ ಭಯೋತ್ಪಾದನೆ ವಿರೋಧಿಸಿ 'ಜೈಲ್‌ ಭರೋ': ಸಚಿವ ಅನಂತಕುಮಾರ ಹೆಗಡೆ
ರಾಜ್ಯ ಸರ್ಕಾರ ಕೃಪಾಪೋಷಿತ ಭಯೋತ್ಪಾದನೆ ವಿರೋಧಿಸಿ 'ಜೈಲ್‌ ಭರೋ': ಸಚಿವ ಅನಂತಕುಮಾರ ಹೆಗಡೆ   

ಶಿರಸಿ: ಹೊನ್ನಾವರದಲ್ಲಿ ಕಾವ್ಯಾ ನಾಯ್ಕ ಮೇಲೆ ಚಾಕು ಇರಿತ ನಡೆದಿರುವುದನ್ನು ಎಲ್ಲರೂ ಗಂಭೀರ ಪರಿಗಣಿಸಿದ್ದಾರೆ ಎಂದು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಪ್ರತಿಕ್ರಿಯಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಕೃಪಾಪೋಷಿತ ಭಯೋತ್ಪಾದನೆಯ ವಿರುದ್ಧ ಇಡೀ ರಾಜ್ಯದಾದ್ಯಂತ ಜೈಲ್ ಭರೋ ಕಾರ್ಯಕ್ರಮ‌ ಹಮ್ಮಿಕೊಳ್ಳಲಾಗುವುದು. ಡಿ.19 ರಿಂದ ಉತ್ತರ ಕನ್ನಡದಿಂದ ಈ ಕಾರ್ಯಕ್ರಮ ಪ್ರಾರಂಭಿಸಲಾಗುವುದು ಎಂದರು.

ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ಪ್ರತಿನಿತ್ಯ ಒಂದಲ್ಲ ಒಂದು ಕಡೆ ಈ ಕಾರ್ಯಕ್ರಮ ನಡೆಸಲಾಗುತ್ತದೆ ಎಂದು ಹೇಳಿದರು.

ADVERTISEMENT

ಸ್ವಜನ ಪಕ್ಷಪಾತದ ಕಾಂಗ್ರೆಸ್ ಸರ್ಕಾರದಲ್ಲಿ ಅಧಿಕಾರಿಗಳು ನೈತಿಕತೆ ಕಳೆದುಕೊಂಡಿದ್ದಾರೆ. ಸರ್ಕಾರ ಹೇಳಿದಂತೆ ಅಧಿಕಾರಿಗಳು ಕೇಳುತ್ತಾರೆ. ಶಿರಸಿಯಲ್ಲಿ ನಡೆದ ಗಲಭೆಯಲ್ಲಿ ಪೊಲೀಸರೇ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಆರೋಪಿಸಿದರು.

ಕೇಂದ್ರ ಸಚಿವರಾಗಲು ಅನಂತಕುಮಾರ ಹೆಗಡೆಗೆ ಅರ್ಹತೆ ಇಲ್ಲ ಎನ್ನುವ ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಸ್ಥಾನದಲ್ಲಿ ಕುಳಿತುಕೊಳ್ಳುವ ಅರ್ಹತೆ ಇದೆಯೇ ಎಂದು‌ ಪ್ರಶ್ನಿಸಿದರು.

ಸಿದ್ದರಾಮಯ್ಯ ಅವರ ಬಗ್ಗೆ ಪಕ್ಷದಲ್ಲಿ ಅಸಮಾಧಾನ ಇದೆ. ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಿಗೆ ಅವರ ಬಗ್ಗೆ ಒಲವಿಲ್ಲ ಎಂದರು.

ಖಾಸಗಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ: ಪರೇಶ ಮೇಸ್ತ ಸಾವಿನ ಪ್ರಕರಣವನ್ನು ಸರ್ಕಾರ ಸಿಬಿಐಗೆ ಹಸ್ತಾಂತರಿಸಿದೆ. ಮೇಲ್ನೋಟಕ್ಕೆ ಇದು ಸತ್ಯವಾದರೂ ದಾಖಲೆಗಳ ನಾಶ ಮಾಡಲಾಗಿದೆ. ಮರಣೋತ್ತರ ಪರೀಕ್ಷೆಯನ್ನು ಸರ್ಕಾರಿ ಆಸ್ಪತ್ರೆಯಲ್ಲಿ ನಡೆಸದೇ ಖಾಸಗಿ ಆಸ್ಪತ್ರೆಯಲ್ಲಿ ಮಾಡಿರುವುದು ಅನುಮಾನ ಮೂಡಿಸಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.