ಚಿಕ್ಕಮಗಳೂರು: ರಾಜ್ಯ ಸರ್ಕಾರ ಜಾಗ ಒದಗಿಸಿದರೆ ಜಿಲ್ಲೆಯಲ್ಲಿ ಸ್ಪೈಸ್ ಪಾರ್ಕ್ ಸ್ಥಾಪನೆಗೆ ಅಗತ್ಯ ಕ್ರಮ ವಹಿಸಲಾಗುವುದು ಎಂದು ಕೇಂದ್ರ ಕೈಗಾರಿಕಾ ಮತ್ತು ವಾಣಿಜ್ಯ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಲ್ಲಿ ತಿಳಿಸಿದರು.
‘ಈ ಭಾಗದಲ್ಲಿ ಸ್ಪೈಸ್ ಪಾರ್ಕ್ ಸ್ಥಾಪಿಸಬೇಕು ಎಂದು ಕಾಳುಮೆಣಸು ಬೆಳೆಗಾರರು ಬೇಡಿಕೆ ಇಟ್ಟಿದ್ದಾರೆ. ರಾಜ್ಯ ಸರ್ಕಾರ ಭೂಮಿ ಒದಗಿಸಿ ಪೂರಕ ಸಹಕಾರ ನೀಡಿದರೆ ಒಂದು ತಿಂಗಳೊಳಗೆ ಪಾರ್ಕ್ ಸ್ಥಾಪನೆ ಪ್ರಕ್ರಿಯೆಯನ್ನು ಆರಂಭಿಸಲಾಗುವುದು’ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
‘ಪಾರ್ಕ್ ಆರಂಭಕ್ಕೆ ಬೇಕಾದ ಸವಲತ್ತುಗಳನ್ನು ಕೇಂದ್ರ ಸರ್ಕಾರ ಒದಗಿಸಲಿದೆ. ಪಾರ್ಕ್ ಆರಂಭವಾದರೆ ಕಾಳುಮೆಣಸು ಬೆಳೆಗಾರರಿಗೆ ಅನುಕೂಲವಾಗಲಿದೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.