ರಾಮನಗರ: ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಕೆಲವೇ ಗಂಟೆಗಳ ಮುನ್ನ ಎಚ್.ಡಿ. ಕುಮಾರಸ್ವಾಮಿ ರಾಮನಗರಕ್ಕೆ ಭೇಟಿ ನೀಡಿದರು.
ಇಲ್ಲಿನ ಚಾಮುಂಡೇಶ್ವರಿ ದೇವಾಲಯದಲ್ಲಿ ಪತ್ನಿ ಅನಿತಾ ಜೊತೆಗೂಡಿ ಪೂಜೆ ಸಲ್ಲಿಸಿದ ಅವರು, ನಂತರದ ನಗರದ ಚರ್ಚ್ ಹಾಗೂ ಮಸೀದಿಗೂ ಭೇಟಿ ಕೊಟ್ಟರು.
'ಉಪ ಮುಖ್ಯಮಂತ್ರಿ ಹುದ್ದೆ ಸಿಗದ ಹಿನ್ನೆಲೆಯಲ್ಲಿ ಡಿ.ಕೆ. ಶಿವಕುಮಾರ್ ಕಾಂಗ್ರೆಸ್ ಹೈಕಮಾಂಡ್ ಸಂಪರ್ಕಕ್ಕೆ ಸಿಗುತ್ತಿಲ್ಲ' ಎಂಬ ವದಂತಿ ಕುರಿತು ಪತ್ರಕರ್ತರಿಗೆ ಪ್ರತಿಕ್ರಿಯಿಸಿದ ಅವರು ' ಈ ಬಗ್ಗೆ ನನಗೆ ಮಾಹಿತಿ ಇಲ್ಲ. ಮಾಧ್ಯಮಗಳಲ್ಲಿ ಕೆಲವು ಊಹಾಪೋಹದ ವರದಿಗಳು ಹರಿದಾಡುತ್ತಿದ್ದು, ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ' ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.