ರಾಮನಗರ: ತಾಲ್ಲೂಕಿನ ಹುಲಿಕೆರೆ ಗ್ರಾಮದ ಮಾದಯ್ಯ (90) ನಾಪತ್ತೆಯಾಗಿದ್ದು, ಅರ್ಕಾವತಿ ನದಿಯಲ್ಲಿ ಕೊಚ್ಚಿ ಹೋಗಿರಬಹುದು ಎಂದು ಶಂಕಿಸಲಾಗಿದೆ.
ಸೋಮವಾರ ಮುಂಜಾನೆ ಅವರು ಬಹಿರ್ದೆಸೆಗೆಂದು ತೆರಳಿದ್ದರು. ಅರ್ಕಾವತಿ ನದಿ ದಡದಲ್ಲಿ ಚಪ್ಪಲಿಗಳು ದೊರೆತಿದ್ದು, ಕಾಲು ಜಾರಿ ನದಿಗೆ ಬಿದ್ದಿರಬಹದು ಎಂದು ಶಂಕಿಸಲಾಗಿದೆ.
ಗ್ರಾಮೀಣ ಠಾಣೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ನದಿಯಲ್ಲಿ ಶೋಧ ಕಾರ್ಯ ನಡೆಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.