ಬೆಂಗಳೂರು: ರಾಷ್ಟ್ರಪತಿ ಚುನಾವಣೆಯಲ್ಲಿ ಯುಪಿಎ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಕೇಂದ್ರ ಹಣಕಾಸು ಸಚಿವ ಪ್ರಣವ್ ಮುಖರ್ಜಿ ಅವರನ್ನು ಜೆಡಿಎಸ್ ಬೆಂಬಲಿಸಲಿದೆ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಪ್ರಕಟಿಸಿದರು.
ತಮ್ಮ ನಿವಾಸದಲ್ಲಿ ಗುರುವಾರ ಪತ್ರಿಕಾಗೋಷ್ಠಿ ನಡೆಸಿದ ಅವರು, `ಪ್ರಣವ್ ಅವರನ್ನು ರಾಷ್ಟ್ರಪತಿ ಸ್ಥಾನಕ್ಕೆ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ನಿರ್ಧಾರ ತೆಗೆದುಕೊಂಡ ನಂತರ ಪ್ರಧಾನಿ ಸಿಂಗ್ ನನ್ನನ್ನು ಸಂಪರ್ಕಿಸಿ ಬೆಂಬಲ ನೀಡುವಂತೆ ಕೋರಿದರು. ಹಾಗೆಯೇ ಪ್ರಣವ್ ಅವರೂ ಮನವಿ ಮಾಡಿದ್ದಾರೆ~ ಎಂದರು.
ಎಲ್ಲವನ್ನೂ ತೆರೆದಿಡುವೆ: `50 ವರ್ಷಗಳ ನನ್ನ ರಾಜಕೀಯ ಜೀವನದ ಏಳು-ಬೀಳುಗಳನ್ನು ಪುಸ್ತಕದಲ್ಲಿ ದಾಖಲಿಸುತ್ತಿದ್ದೇನೆ. ಬಾಲ್ಯದ ಕುರಿತೂ ಪುಸ್ತಕದಲ್ಲಿ ಮಾಹಿತಿ ಇರಲಿದೆ. ಕುಮಾರಸ್ವಾಮಿ ಹಿಂದೆ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡ ಸಂದರ್ಭ ಹೇಗಿತ್ತು ಎಂಬ ಬಗ್ಗೆ ಬರೆಯುತ್ತೇನೆ. ಪುಸ್ತಕ ಬರೆಯುವುದಕ್ಕಾಗಿ ಪ್ರತಿ ದಿನ ಒಂದು ಗಂಟೆ ಮೀಸಲಿಟ್ಟಿದ್ದೇನೆ~ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.