ಬೆಂಗಳೂರು: ಅಖಿಲ ಭಾರತ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ರಾಹುಲ್ ಗಾಂಧಿ ನವೆಂಬರ್ 21 ಹಾಗೂ 22 ರಂದು ರಾಜ್ಯಕ್ಕೆ ಭೇಟಿ ನೀಡುವ ಸಂಭವ ಇದೆ.
ನ.19ರಂದು ಚಿಕ್ಕಮಗಳೂರಿನಲ್ಲಿ ರಾಜ್ಯ ಕಾಂಗ್ರೆಸ್ ಆಯೋಜಿಸಿರುವ ಇಂದಿರಾಗಾಂಧಿ ಜನ್ಮ ಶತಮಾನೋತ್ಸವದಲ್ಲಿ ರಾಹುಲ್ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಅಂದು ದೆಹಲಿಯಲ್ಲೇ ಉಳಿಯಬೇಕಾದ ಅನಿವಾರ್ಯತೆ ಇದ್ದುದರಿಂದ ರಾಹುಲ್ ಕಾರ್ಯಕ್ರಮ ರದ್ದಾಗಿತ್ತು.
‘ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ ಅವರಿಗೆ ಭಾನುವಾರ ಕರೆ ಮಾಡಿದ ರಾಹುಲ್ ಗಾಂಧಿ, 21 ಮತ್ತು 22ರಂದು ರಾಜ್ಯಕ್ಕೆ ಭೇಟಿ ನೀಡಲು ಸಿದ್ಧ. ಕಾರ್ಯಕ್ರಮ ಮರು ಹೊಂದಾಣಿಕೆ ಮಾಡಬಹುದೇ ಎಂಬ ಬಗ್ಗೆ ತಿಳಿಸಿ ಎಂದು ಸೂಚಿಸಿದ್ದಾರೆ’ ಎಂದು ಮೂಲಗಳು ತಿಳಿಸಿವೆ. ‘ಕೆಪಿಸಿಸಿ ಅಧ್ಯಕ್ಷರಾಗಿ ಏಳು ವರ್ಷ ಪೂರೈಸಿರುವ ಪರಮೇಶ್ವರಗೆ ಅಭಿನಂದನೆ ಹೇಳಿದ ರಾಹುಲ್, ನಿಮ್ಮ ಅಧ್ಯಕ್ಷತೆಯಲ್ಲಿ ಪಕ್ಷ ಅಧಿಕಾರ ತರಲು ಶ್ರಮಿಸಿ. ನಿಮ್ಮೊಂದಿಗೆ ನಾವಿದ್ದೇವೆ ಎಂದು ತಿಳಿಸಿದರು’ ಎಂದು ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.