ADVERTISEMENT

ರಾಹುಲ್‌ ಸುತ್ತ ಲೂಟಿಕೋರರು: ಯಡಿಯೂರಪ್ಪ ವ್ಯಂಗ್ಯ

​ಪ್ರಜಾವಾಣಿ ವಾರ್ತೆ
Published 26 ಏಪ್ರಿಲ್ 2018, 14:50 IST
Last Updated 26 ಏಪ್ರಿಲ್ 2018, 14:50 IST
ರಾಹುಲ್‌ ಸುತ್ತ ಲೂಟಿಕೋರರು: ಯಡಿಯೂರಪ್ಪ ವ್ಯಂಗ್ಯ
ರಾಹುಲ್‌ ಸುತ್ತ ಲೂಟಿಕೋರರು: ಯಡಿಯೂರಪ್ಪ ವ್ಯಂಗ್ಯ   

ಶಿವಮೊಗ್ಗ: ‘ರಾಜ್ಯ ಹಾಳುಮಾಡಿದ ಲೂಟಿಕೋರರನ್ನು ತನ್ನ ಸುತ್ತ ಇಟ್ಟುಕೊಂಡು ಓಡಾಡುವ ರಾಹುಲ್‌ ಗಾಂಧಿ, ಕಳಂಕಿತರನ್ನೆಲ್ಲ ಮೋದಿ ವಿಧಾನಸಭೆಗೆ ಕಳುಹಿಸುತ್ತಿದ್ದಾರೆ ಎನ್ನುತ್ತಾರೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕುಟುಕಿದರು.

ನಗರದಲ್ಲಿ ಗುರುವಾರ ಸುದ್ದಿಗಾರರ ಜತೆ ಅವರು ಮಾತನಾಡಿದರು.

‘ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಒಬ್ಬ ತಲೆತಿರುಕ. ಆತನ ಹೇಳಿಕೆಗೆ ಒತ್ತು ನೀಡುವ ಅಗತ್ಯವಿಲ್ಲ. ಯಾರ ಬಗ್ಗೆ ಹೇಗೆ ಮಾತನಾಡಬೇಕು ಎನ್ನುವ ಕನಿಷ್ಠ ಪರಿಜ್ಞಾನವೂ ಅವರಿಗಿಲ್ಲ. ಕಾಂಗ್ರೆಸ್‌ ರಾಜ್ಯದಲ್ಲಿ ಹಗಲು ದರೋಡೆ ನಡೆಸಿದೆ. ಅದು ರಾಹುಲ್ ಗಾಂಧಿಗೆ ತಿಳಿದಿಲ್ಲವೇ?’ ಎಂದು ತಿರುಗೇಟು ನೀಡಿದರು.

ADVERTISEMENT

ರಾಜ್ಯದ 224 ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳ ಜತೆಗೆ ಪ್ರಧಾನಿ ನರೇಂದ್ರ ಮೋದಿ ವಿಡಿಯೊ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದ್ದಾರೆ. ಇದು ಚುನಾವಣಾ ಸಮಯದಲ್ಲಿ ಒಳ್ಳೆಯ ಬೆಳವಣಿಗೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.