ಬೆಂಗಳೂರು: ಲಾಭದಾಯಕ ಹುದ್ದೆ ಅಲಂಕರಿಸಿರುವ ಆರೋಪ ಎದುರಿಸುತ್ತಿರುವ ಸಚಿವರಾದ ಜಿ.ಜನಾರ್ದನ ರೆಡ್ಡಿ ಹಾಗೂ ಬಿ.ಶ್ರೀರಾಮುಲು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರಿಗೂ ತಲಾ 2,500 ರೂಪಾಯಿ ದಂಡ ವಿಧಿಸಿ ಹೈಕೋರ್ಟ್ ಶುಕ್ರವಾರ ಆದೇಶಿಸಿದೆ.
ಈ ಪ್ರಕರಣವು ವಿಚಾರಣೆಗೆ ಬಂದಾಗ ರೆಡ್ಡಿ ಪರ ವಕೀಲರು ಗೈರು ಹಾಜರಾಗಿದ್ದರಿಂದ ಹಾಗೂ ದ್ವಿಪ್ರತಿಯಲ್ಲಿ ಅರ್ಜಿ ಸಲ್ಲಿಸದ ಕಾರಣ, ಅಸಮಾಧಾನ ವ್ಯಕ್ತಪಡಿಸಿದ ಮುಖ್ಯ ನ್ಯಾಯಮೂರ್ತಿ ಜೆ.ಎಸ್.ಕೇಹರ್ ಹಾಗೂ ನ್ಯಾಯಮೂರ್ತಿ ಅಶೋಕ ಬಿ.ಹಿಂಚಿಗೇರಿ ಅವರು ದಂಡ ವಿಧಿಸಿ ಆದೇಶಿಸಿದ್ದಾರೆ.
ಓಬಳಾಪುರಂ ಮೈನಿಂಗ್ ಕಂಪೆನಿ ಹಾಗೂ ಅನಂತಪುರ ಮೈನಿಂಗ್ ಕಂಪೆನಿಯ ಮಾಲೀಕರಾಗಿರುವ ಜನಾರ್ದನ ರೆಡ್ಡಿ, ಕರುಣಾಕರ ರೆಡ್ಡಿ ಹಾಗೂ ಶ್ರೀರಾಮುಲು ಲಾಭದಾಯಕ ಹುದ್ದೆ ಹೊಂದಿದ್ದು, ಅವರನ್ನು ಸಚಿವ ಸಂಪುಟದಿಂದ
ಕೈಬಿಡುವಂತೆ ಶಾಸಕ ಕೆ.ಸಿ. ಕೊಂಡಯ್ಯ ಅವರು ರಾಜ್ಯಪಾಲರಿಗೆ ನೀಡಿರುವ ದೂರಿನ ವಿವಾದ ಇದಾಗಿದೆ. ಈ ದೂರಿನ ಮುಂದಿನ ಪ್ರಕ್ರಿಯೆಗೆ ತಡೆ ನೀಡುವಂತೆ ಅವರು ಏಕಸದಸ್ಯಪೀಠದ ಮುಂದೆ ಅರ್ಜಿ ಸಲ್ಲಿಸಿದ್ದರು.
ಸರ್ವೇಕ್ಷಣಾ ಇಲಾಖೆಗೆ ದಂಡ: ಜಮೀನೊಂದರ ಸರ್ವೇ ಕಾರ್ಯವನ್ನು ಹೈಕೋರ್ಟ್ ಆದೇಶದ ಹೊರತಾಗಿಯೂ ನಡೆಸದ ಭಾರತೀಯ ಸರ್ವೇಕ್ಷಣಾ ಇಲಾಖೆಯ ನಿಯಂತ್ರಣಾಧಿಕಾರಿಗೆ ಐದು ಸಾವಿರ ರೂಪಾಯಿ ದಂಡ ವಿಧಿಸಿ ಹೈಕೋರ್ಟ್ ಶುಕ್ರವಾರ ಆದೇಶಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.