ಶಿವಮೊಗ್ಗ: ಯಡಿಯೂರಪ್ಪ ನೇತೃತ್ವದಲ್ಲಿ ಶಾಸಕರ ರೆಸಾರ್ಟ್ ಪ್ರಯಾಣವನ್ನು ತಾವು ಗಂಭೀರವಾಗಿ ಪರಿಗಣಿಸುವುದಿಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ ತೀಕ್ಷ್ಣವಾಗಿ ಹೇಳಿದರು.
ಇದು ಆಶಿಸ್ತು ಅಲ್ಲ; ಪಕ್ಷದ ಸಂಘಟನೆ, ಸರ್ಕಾರವನ್ನು ಬಲಪಡಿಸುವ ಉದ್ದೇಶದಿಂದ ಯಡಿಯೂರಪ್ಪ ರೆಸಾರ್ಟ್ ಸಭೆ ನಡೆಸುತ್ತಿರಬಹುದು ಎಂದು ಭಾನುವಾರ ರಾತ್ರಿ ಭೇಟಿಯಾದ ಸುದ್ದಿಗಾರರಿಗೆ ತಿಳಿಸಿದರು. ಸಭೆ ನಡೆಸಲು ಎಲ್ಲರೂ ಸ್ವತಂತ್ರರಿದ್ದಾರೆ. ಇದನ್ನು ಅಶಿಸ್ತು ಎನ್ನಲಾಗದು ಎಂದು ಸ್ಪಷ್ಟಪಡಿಸಿದರು.
ಯಡಿಯೂರಪ್ಪ 48 ಗಂಟೆಯ ಗಡುವು ನೀಡಿದ್ದರಲ್ಲ ಎಂಬ ಪ್ರಶ್ನೆಗೆ, ಯಡಿಯೂರಪ್ಪ ಅವರ ಇಂತಹ ಗಡುವು ಸಾಕಷ್ಟು ನೋಡಿದ್ದೇವೆ. ಕಾಶಿ, ವೈಷ್ಣವಿದೇವಿ, ದೆಹಲಿ ಭೇಟಿ ಇಂತಹ ಹಲವು ಗಡುವುಗಳನ್ನು ಅವರು ನೀಡುತ್ತಲೇ ಬಂದಿದ್ದಾರೆ ಎಂದು ವ್ಯಂಗ್ಯವಾಡಿದರು.
ನಾಯಕತ್ವ ಬದಲಾವಣೆ ಇಲ್ಲ
ಶಿವಮೊಗ್ಗ: ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಅವರೇ ಬಜೆಟ್ ಮಂಡಿಸುತ್ತಾರೆ. ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ. ಇದರಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ ಪುನರುಚ್ಚರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.