
ಪ್ರಜಾವಾಣಿ ವಾರ್ತೆಬೆಂಗಳೂರು : ನಾಗತಿಹಳ್ಳಿ ಸಂಸ್ಕೃತಿ ಹಬ್ಬದ ದಶಮಾನೋತ್ಸವ ಸಂಭ್ರಮದ ಅಂಗವಾಗಿ ಈ ತಿಂಗಳ 31ರಂದು (ಯುಗಾದಿ ದಿನ) ರೈತರಿಗೆ ಒಂದು ದಿನದ ಕಾರ್ಯಾಗಾರವನ್ನು ಮಂಡ್ಯ ಜಿಲ್ಲೆಯ ನಾಗತಿಹಳ್ಳಿ ಗ್ರಾಮದಲ್ಲಿ ಏರ್ಪಡಿಸಲಾಗಿದೆ.
ಕೃಷಿಯಲ್ಲಿ ಸೌರಶಕ್ತಿಯನ್ನು ಬಳಸುವ ವಿಧಾನ ಮತ್ತು ಕೃಷಿಯಲ್ಲಿ ಲಾಭ ಗಳಿಸುವುದು ಹೇಗೆ ಎಂಬ ವಿಷಯಗಳ ಬಗ್ಗೆ ತಜ್ಞರು ಮತ್ತು ಕೃಷಿಕರಿಂದ ಪ್ರಾತ್ಯಕ್ಷಿಕೆ ,ಉಪನ್ಯಾಸ ಮತ್ತು ಚರ್ಚೆ ಏರ್ಪಡಿಸಲಾಗಿದೆ ಎಂದು ಪತ್ರಿಕಾಪ್ರಕಟಣೆ ತಿಳಿಸಿದೆ.
ಆಸಕ್ತರು, ನಾಗತಿಹಳ್ಳಿ ಚಂದ್ರಶೇಖರ್, ಸಂಚಾಲಕರು, ನಾಗತಿಹಳ್ಳಿ ಸಂಸ್ಕೃತಿ ಹಬ್ಬ–2014, ನಂ.166, 28ನೇ ಅಡ್ಡರಸ್ತೆ, 17ನೇ ಮುಖ್ಯರಸ್ತೆ, ಬನಶಂಕರಿ 2ನೇ ಹಂತ, ಬೆಂಗಳೂರು–560070. (ಮೊ 9740092323) ಈ ವಿಳಾಸಕ್ಕೆ ಸಂಪರ್ಕಿಸಿ ಈ ತಿಂಗಳ 15ರ ಒಳಗೆ ನೋಂದಾಯಿಸಿಕೊಳ್ಳಲು ಕೋರಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.