ADVERTISEMENT

ರೈತರಿಗೆ ನೆರವಾಗಿ: ಪುನೀತ್

​ಪ್ರಜಾವಾಣಿ ವಾರ್ತೆ
Published 1 ಜೂನ್ 2012, 19:30 IST
Last Updated 1 ಜೂನ್ 2012, 19:30 IST
ರೈತರಿಗೆ ನೆರವಾಗಿ: ಪುನೀತ್
ರೈತರಿಗೆ ನೆರವಾಗಿ: ಪುನೀತ್   

ಬೆಂಗಳೂರು: `ಜನರು ಹಾಲು ಹಾಗೂ ಎಳನೀರು ಹೆಚ್ಚಿನ ಪ್ರಮಾಣದಲ್ಲಿ ಬಳಸಿ ರೈತ ಸಮುದಾಯಕ್ಕೆ ನೆರವಾಗಬೇಕು~ ಎಂದು ಸಿನಿಮಾ ನಟ ಪುನೀತ್ ರಾಜ್ ಕುಮಾರ್ ವಿನಂತಿಸಿದರು.

ಕರ್ನಾಟಕ ಹಾಲು ಮಹಾಮಂಡಳಿಯ ಮದರ್ ಡೇರಿಯ ಆಶ್ರಯದಲ್ಲಿ ವಿಶ್ವ ಹಾಲು ದಿನಾಚರಣೆಯ ಅಂಗವಾಗಿ ನಗರದ ಆರ್.ಟಿ. ನಗರದ ಫ್ಲಾರೆನ್ಸ್ ಪ್ರೌಢಶಾಲೆಯಲ್ಲಿ ಶುಕ್ರವಾರ ನಡೆದ ಶಾಲಾ ಮಕ್ಕಳಿಗೆ ಉಚಿತ ನಂದಿನಿ ಹಾಲು ವಿತರಣೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.   ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಡಾ.ಎಂ.ಎನ್. ವೆಂಕಟರಾಮು ಮಾತನಾಡಿ, `ಪಟ್ಟಭದ್ರ ಹಿತಾಸಕ್ತಿಗಳು ಹಾಲಿನ ಬಗ್ಗೆ ತಪ್ಪು ತಿಳಿವಳಿಕೆ ಮೂಡಿಸುತ್ತಿವೆ. ಈ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ಮುಗಿಬಿದ್ದ ಚಿಣ್ಣರು :ಮದರ್ ಡೇರಿಯ ಆಶ್ರಯದಲ್ಲಿ ನಗರದ ಹೆಬ್ಬಾಳದ ಸುಮಂಗಲಿ ಸೇವಾಶ್ರಮದಲ್ಲಿ ಶುಕ್ರವಾರ ನಡೆದ ಉಚಿತ ಹಾಲು ವಿತರಣೆ ಕಾರ್ಯಕ್ರಮದಲ್ಲಿ ಸಿನಿಮಾ ನಟ ಪುನೀತ್ ರಾಜ್ ಕುಮಾರ್ ಅವರ ಕೈಕುಲುಕಲು, ಮಾತನಾಡಿಸಲು ಚಿಣ್ಣರು ಮುಗಿಬಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.