ಹಾವೇರಿ: ರೈತರಿಗೆ ಸಹಕಾರಿ ಸಂಘ, ಸಂಸ್ಥೆಗಳ ಮೂಲಕ ಶೇ 1ರ ಬಡ್ಡಿ ದರದಲ್ಲಿ ಸಾಲ ನೀಡುವ ಪ್ರಕ್ರಿಯೆ ಬರುವ ಏ.1ರಿಂದ ಜಾರಿಗೆ ಬರಲಿದೆ ಎಂದು ಸಹಕಾರಿ ಸಚಿವ ಲಕ್ಷ್ಮಣ ಸವದಿ ಬುಧವಾರ ಇಲ್ಲಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಗಡ ಪತ್ರದಲ್ಲಿ ಈ ಹೊಸ ಸಾಲ ಸೌಲಭ್ಯ ಯೋಜನೆಗೆ ಅವಶ್ಯವಿರುವ 500 ಕೋಟಿ ರೂ. ತೆಗೆದಿರಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ.
ಹಣ ನೀಡಲು ಮುಖ್ಯಮಂತ್ರಿಗಳು ಒಪ್ಪಿಗೆ ಸೂಚಿಸಿದ್ದಾರೆ. ಹೀಗಾಗಿ ಈ ಯೋಜನೆ ಏ.1 ರಿಂದ ಜಾರಿಗೆ ಬರುವುದು ಖಚಿತ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.