ADVERTISEMENT

ರೈತರ ಮೇಲೆ ಗೋಲಿಬಾರ್, ರಾಹುಲ್ ಬಂಧನ ಖಂಡಿಸಿ ಹುಬ್ಬಳ್ಳಿಯಲ್ಲಿ ಸಾಂಕೇತಿಕ ರೈಲು ತಡೆ

​ಪ್ರಜಾವಾಣಿ ವಾರ್ತೆ
Published 13 ಜೂನ್ 2017, 7:02 IST
Last Updated 13 ಜೂನ್ 2017, 7:02 IST
ರೈತರ ಮೇಲೆ ಗೋಲಿಬಾರ್, ರಾಹುಲ್ ಬಂಧನ ಖಂಡಿಸಿ ಹುಬ್ಬಳ್ಳಿಯಲ್ಲಿ ಸಾಂಕೇತಿಕ ರೈಲು ತಡೆ
ರೈತರ ಮೇಲೆ ಗೋಲಿಬಾರ್, ರಾಹುಲ್ ಬಂಧನ ಖಂಡಿಸಿ ಹುಬ್ಬಳ್ಳಿಯಲ್ಲಿ ಸಾಂಕೇತಿಕ ರೈಲು ತಡೆ   

ಹುಬ್ಬಳ್ಳಿ: ಮಧ್ಯಪ್ರದೇಶದಲ್ಲಿ ರೈತರ ಮೇಲೆ ಗೋಲಿಬಾರ್ ಮಾಡಿರುವುದನ್ನು ಖಂಡಿಸಿ ಹಾಗೂ ರೈತರ ಸಮಸ್ಯೆ ಕೇಳಲು ಹೋದ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಬಂಧಿಸಿದ್ದನ್ನು ಖಂಡಿಸಿ ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಕಾರ್ಯಕರ್ತರು ನಗರ ರೈಲು ನಿಲ್ದಾಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ರೈಲು ನಿಲ್ದಾಣಕ್ಕೆ ಮುತ್ತಿಗೆ ಹಾಕಿದ ಪ್ರತಿಭಟನಾಕಾರರು, ಅಲ್ಲಿ ನಿಂತಿದ್ದ ಹುಬ್ಬಳ್ಳಿ ಮೀರಜ್ ಪ್ಯಾಸೆಂಜರ್ ರೈಲನ್ನು ಐದು ನಿಮಿಷ ಸಾಂಕೇತಿಕವಾಗಿ ತಡೆದು ಪ್ರತಿಭಟನೆ ನಡೆಸಿದರು.

ರೈಲು ಸಂಚಾರಕ್ಕೆ ಯಾವುದೇ ತೊಂದರೆ ಆಗಿಲ್ಲ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.