ADVERTISEMENT

ರೈತರ ಸಾಲ ಮನ್ನಾ ಮುಖ್ಯಮಂತ್ರಿ ವಾಗ್ದಾನ

​ಪ್ರಜಾವಾಣಿ ವಾರ್ತೆ
Published 25 ಮೇ 2018, 19:29 IST
Last Updated 25 ಮೇ 2018, 19:29 IST
ವಿಧಾನಸೌಧದಲ್ಲಿ ಜೆಡಿಎಸ್–ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಬಹುಮತ ಸಾಬೀತಿಗೆ ಶುಕ್ರವಾರ ಕರೆಯಲಾಗಿದ್ದ ವಿಧಾನಸಭೆಯ ಅಧಿವೇಶನದಲ್ಲಿ ಬಹುಮತ ಸಾಬೀತಾದ ನಂತರ ಮುಖ್ಯ ಮಂತ್ರಿ ಕುಮಾರಸ್ವಾಮಿ ಅವರನ್ನು ಆಡಳಿತ ಪಕ್ಷದ ಸದಸ್ಯರು ಅಭಿನಂದಿಸಿದರು –ಪ್ರಜಾವಾಣಿ ಚಿತ್ರ
ವಿಧಾನಸೌಧದಲ್ಲಿ ಜೆಡಿಎಸ್–ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಬಹುಮತ ಸಾಬೀತಿಗೆ ಶುಕ್ರವಾರ ಕರೆಯಲಾಗಿದ್ದ ವಿಧಾನಸಭೆಯ ಅಧಿವೇಶನದಲ್ಲಿ ಬಹುಮತ ಸಾಬೀತಾದ ನಂತರ ಮುಖ್ಯ ಮಂತ್ರಿ ಕುಮಾರಸ್ವಾಮಿ ಅವರನ್ನು ಆಡಳಿತ ಪಕ್ಷದ ಸದಸ್ಯರು ಅಭಿನಂದಿಸಿದರು –ಪ್ರಜಾವಾಣಿ ಚಿತ್ರ   

ಬೆಂಗಳೂರು: ರೈತರು ರಾಷ್ಟ್ರೀಕೃತ, ಸಹಕಾರಿ ಬ್ಯಾಂಕ್‌ಗಳಲ್ಲಿ ಮಾಡಿರುವ ₹ 53,000 ಕೋಟಿ ಮೊತ್ತದ ಕೃಷಿ ಸಾಲವನ್ನು ಮನ್ನಾ ಮಾಡುವುದಾಗಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಘೋಷಿಸಿದರು.

ವಿಧಾನಸಭೆಯಲ್ಲಿ ಶುಕ್ರವಾರ ವಿಶ್ವಾಸಮತ ಯಾಚಿಸಿ ಮಾತನಾಡಿದ ಅವರು, ‘ಸಾಲ ಮನ್ನಾ ಮಾಡುವುದಿಲ್ಲ ಎಂದು ಹೇಳಿಲ್ಲ. ನಮ್ಮ ಪಕ್ಷಕ್ಕೆ ಪೂರ್ಣ ಬಹುಮತ ಬಂದಿದ್ದರೆ 24 ಗಂಟೆಗಳಲ್ಲೇ ಘೋಷಣೆ ಮಾಡುತ್ತಿದ್ದೆ. ಈಗ ಇರುವುದು ಸಮ್ಮಿಶ್ರ ಸರ್ಕಾರ. ಹೀಗಾಗಿ, ಏಕಾಂಗಿಯಾಗಿ ಘೋಷಣೆ ಮಾಡಲು ಆಗುವುದಿಲ್ಲ. ಕಾಂಗ್ರೆಸ್‌ ನಾಯಕರ ಜತೆಗೆ ಚರ್ಚಿಸಬೇಕಿದೆ’ ಎಂದರು.

‘ಸಾಲ ಮಾಡಿ ಕಾರ್ಯಕ್ರಮಗಳ ಅನುಷ್ಠಾನ ಮಾಡುವುದಿಲ್ಲ. ಕಾಂಗ್ರೆಸ್‌ ಸರ್ಕಾರದ ಜನಪ್ರಿಯ ಕಾರ್ಯಕ್ರಮಗಳು ಹಾಗೂ ಆ ಪಕ್ಷದ ಪ್ರಣಾಳಿಕೆಯಲ್ಲಿನ ಉತ್ತಮ ವಿಷಯಗಳನ್ನು ಅನುಷ್ಠಾನಗೊಳಿಸುತ್ತೇನೆ’ ಎಂದರು.

ADVERTISEMENT

ರಾಜ್ಯ ಬಂದ್‌: ಬಿಎಸ್‌ವೈ ಎಚ್ಚರಿಕೆ

‘ಜೆಡಿಎಸ್‌ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಸಂಜೆಯೊಳಗೆ ಸಾಲ ಮನ್ನಾ ಮಾಡದಿದ್ದರೆ ಸೋಮವಾರ ಕರ್ನಾಟಕ ಬಂದ್‌ ನಡೆಸುತ್ತೇವೆ’ ಎಂದು ವಿರೋಧ ಪಕ್ಷದ ನಾಯಕ ಬಿ.ಎಸ್‌.ಯಡಿಯೂರಪ್ಪ ಎಚ್ಚರಿಸಿದರು.

ರಾಜಕೀಯ ಕಾರಣಕ್ಕೆ ಮಾಡುವ ಪ್ರತಿಭಟನೆಗಳಿಗೆ ಬೆದರುವುದಿಲ್ಲ. ಇಂತಹ ನೂರಾರು ಪ್ರತಿಭಟನೆಗಳನ್ನು ನೋಡಿದ್ದೇನೆ
-ಎಚ್‌.ಡಿ. ಕುಮಾರಸ್ವಾಮಿ, ಮುಖ್ಯಮಂತ್ರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.