ಧರ್ಮಪುರ (ಚಿತ್ರದುರ್ಗ ಜಿಲ್ಲೆ): ರೈತನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಿರಿಯೂರು ತಾಲ್ಲೂಕಿನ ಗುಡ್ಡದಗೊಲ್ಲರಹಟ್ಟಿಯಲ್ಲಿ ಮಂಗಳವಾರ ನಡೆದಿದೆ.
ಶಿವಣ್ಣ (30) ಆತ್ಮಹತ್ಯೆ ಮಾಡಿಕೊಂಡ ರೈತ. ಈತ ಬ್ಯಾಂಕ್ನಿಂದ ಮತ್ತು ಕೈಗಡ ಸಾಲ ಪಡೆದಿದ್ದ. ಚಿಲ್ಲಹಳ್ಳಿಯ ವಿಜಯಬ್ಯಾಂಕ್ನಲ್ಲಿ ಸುಮಾರು ರೂ 5 ಲಕ್ಷ ಸಾಲ ಪಡೆದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಅಬ್ಬಿನಹೊಳೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.