ಹುಬ್ಬಳ್ಳಿ: ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗದ ಯೋಜನೆ ಅನುಷ್ಠಾನ ಸೇರಿದಂತೆ ಕರ್ನಾಟಕದ ಎಲ್ಲಾ ಮಹತ್ವದ ರೈಲ್ವೆ ಯೋಜನೆಗಳ ಕುರಿತು ಸಮಗ್ರವಾಗಿ ಚರ್ಚಿಸಲು ಕೇಂದ್ರ ರೇಲ್ವೆ ಸಚಿವ ದಿನೇಶ ತ್ರಿವೇದಿ ಸೆ. 20ರಂದು ಬೆಂಗಳೂರಿನಲ್ಲಿ ಕರ್ನಾಟಕದ ಎಲ್ಲ ಸಂಸದರ ಸಭೆ ನಡೆಸಲಿದ್ದಾರೆ.
ದೆಹಲಿಯಲ್ಲಿ ಸಂಸದ ಅನಂತಕುಮಾರ ಹೆಗಡೆ ಅವರೊಂದಿಗೆ ಕೇಂದ್ರ ರೈಲ್ವೆ ಸಚಿವ ತ್ರಿವೇದಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ಮುನಿಯಪ್ಪ ಅವರನ್ನು ಭೇಟಿ ಮಾಡಿದಾಗ ಈ ಭರವಸೆ ನೀಡಿದ್ದಾರೆ ಎಂದು ಸಂಸದ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.