ADVERTISEMENT

ರೈಲ್ವೆ: ಸಭೆ ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2011, 19:35 IST
Last Updated 17 ಸೆಪ್ಟೆಂಬರ್ 2011, 19:35 IST

ಹುಬ್ಬಳ್ಳಿ: ರಾಜ್ಯದ ನಾಲ್ಕು ರೈಲ್ವೆ ಯೋಜನೆಗಳ ಕುರಿತು ಚರ್ಚಿಸಲು ಇದೇ 20ರಂದು ಬೆಂಗಳೂರಿನಲ್ಲಿ ನಡೆಯಬೇಕಾಗಿದ್ದ ರೈಲ್ವೆ ಮಂಡಳಿ ಸಭೆಯನ್ನು ಮುಂದೂಡಲಾಗಿದೆ ಎಂದು ಸಂಸದ ಪ್ರಹ್ಲಾದ ಜೋಶಿ ಶನಿವಾರ ಇಲ್ಲಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಪ್ಪಳ ವಿಧಾನಸಭಾ ಉಪ ಚುನಾವಣೆ ಹಿನ್ನೆಲೆಯಲ್ಲಿ ಸಭೆಯನ್ನು ಮುಂದೂಡಿರುವುದಾಗಿ ಹೇಳಿದರು.

ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಸೇರಿದಂತೆ ವಿವಿಧ ಯೋಜನೆಗಳ ಬಗ್ಗೆ ಚರ್ಚಿಸಲು ಕೇಂದ್ರ ರೈಲ್ವೆ ಸಚಿವರು ಹಾಗೂ ಮುಖ್ಯಮಂತ್ರಿಗಳ ಸಮಕ್ಷಮದಲ್ಲಿ ಸಭೆ ನಡೆಸಲು ನಿರ್ಧರಿಸಲಾಗಿತ್ತು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.