ADVERTISEMENT

ಲೇಖಕಿಯರ ಸಂಘಕ್ಕೆ ಚುನಾವಣೆ

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2011, 19:30 IST
Last Updated 12 ಅಕ್ಟೋಬರ್ 2011, 19:30 IST

ಬೆಂಗಳೂರು: ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಇದೇ 16ರಂದು ಚುನಾವಣೆ ನಡೆಯಲಿದೆ. ವೈದ್ಯ ಸಾಹಿತಿ ಡಾ.ವಸುಂಧರಾ ಭೂಪತಿ ಮತ್ತು ಲೇಖಕಿ ಬಿ.ನಾರಾಯಣಮ್ಮ ಅವರ ನಡುವೆ ಸ್ಪರ್ಧೆ ಏರ್ಪಟ್ಟಿದೆ.

16ರಂದು ಬೆಳಿಗ್ಗೆ 10 ಗಂಟೆಗೆ ನಗರದ ಚಾಮರಾಜಪೇಟೆಯ ಅಶೋಕ ಶಿಶುವಿಹಾರದಲ್ಲಿ ಮತದಾನ ನಡೆಯಲಿದೆ.  800ಕ್ಕೂ ಹೆಚ್ಚು ಲೇಖಕಿಯರು ಸಂಘದ ಸದಸ್ಯರಾಗಿದ್ದು ಒಂದು ವರ್ಷಕ್ಕೂ ಅಧಿಕ ಅವಧಿಯ ಸದಸ್ಯರು ಮತದಾನ ಮಾಡಬಹುದು. ಅಧ್ಯಕ್ಷ ಸ್ಥಾನಕ್ಕೆ ಮಾತ್ರ ಚುನಾವಣೆ ನಡೆಯಲಿದ್ದು ಪದಾಧಿಕಾರಿಗಳನ್ನು ಆಯ್ಕೆ ಮಾಡುವ ಅಧಿಕಾರ ನೂತನ ಅಧ್ಯಕ್ಷರಿಗೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT