
ಪ್ರಜಾವಾಣಿ ವಾರ್ತೆಬೆಂಗಳೂರು: ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಇದೇ 16ರಂದು ಚುನಾವಣೆ ನಡೆಯಲಿದೆ. ವೈದ್ಯ ಸಾಹಿತಿ ಡಾ.ವಸುಂಧರಾ ಭೂಪತಿ ಮತ್ತು ಲೇಖಕಿ ಬಿ.ನಾರಾಯಣಮ್ಮ ಅವರ ನಡುವೆ ಸ್ಪರ್ಧೆ ಏರ್ಪಟ್ಟಿದೆ.
16ರಂದು ಬೆಳಿಗ್ಗೆ 10 ಗಂಟೆಗೆ ನಗರದ ಚಾಮರಾಜಪೇಟೆಯ ಅಶೋಕ ಶಿಶುವಿಹಾರದಲ್ಲಿ ಮತದಾನ ನಡೆಯಲಿದೆ. 800ಕ್ಕೂ ಹೆಚ್ಚು ಲೇಖಕಿಯರು ಸಂಘದ ಸದಸ್ಯರಾಗಿದ್ದು ಒಂದು ವರ್ಷಕ್ಕೂ ಅಧಿಕ ಅವಧಿಯ ಸದಸ್ಯರು ಮತದಾನ ಮಾಡಬಹುದು. ಅಧ್ಯಕ್ಷ ಸ್ಥಾನಕ್ಕೆ ಮಾತ್ರ ಚುನಾವಣೆ ನಡೆಯಲಿದ್ದು ಪದಾಧಿಕಾರಿಗಳನ್ನು ಆಯ್ಕೆ ಮಾಡುವ ಅಧಿಕಾರ ನೂತನ ಅಧ್ಯಕ್ಷರಿಗೆ ಇದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.