ಬೆಂಗಳೂರು: ನಿವೃತ್ತ ಡಿಜಿಪಿ ಬಿ.ಎನ್.ಗರುಡಾಚಾರ್ ಅವರ ಪತ್ನಿ ವತ್ಸಲಾ (80) ಅವರು ಶನಿವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನ ರಾದರು.
ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಅವರಿಗೆ ಪತಿ, ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರಿದ್ದಾರೆ. ಉದ್ಯಮಿ ಉದಯ್ ಗರುಡಾಚಾರ್ ಅವರು ಮೃತರ ಮಗ. ವಿಲ್ಸನ್ ಗಾರ್ಡನ್ ವಿದ್ಯುತ್ ಚಿತಾಗಾರದಲ್ಲಿ ಸೋಮವಾರ (ಸೆ. 16) ಮಧ್ಯಾಹ್ನ 1 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ. ಕುಟುಂಬ ಸದಸ್ಯರ ಸಂಪರ್ಕಕ್ಕೆ: 9845046722
ಎಚ್.ಆರ್. ರಾಜಶೇಖರ್
ಬೆಂಗಳೂರು: ಕನ್ನಡ ಚಲನಚಿತ್ರ ನಿರ್ಮಾಪಕ ಎಚ್.ಆರ್. ರಾಜಶೇಖರ (49) ಶನಿವಾರ ಮಧ್ಯಾಹ್ನ ನಗರದಲ್ಲಿ ಹೃದಯಾಘಾತದಿಂದ ನಿಧನರಾದರು. ಮೃತರಿಗೆ ತಂದೆ, ತಾಯಿ, ಪತ್ನಿ ಹಾಗೂ ಇಬ್ಬರು ಪುತ್ರರು ಇದ್ದಾರೆ.
ಅಂತ್ಯಕ್ರಿಯೆ ಗುಬ್ಬಿ ತಾಲ್ಲೂಕಿನ ಹೊಸಕೆರೆಯಲ್ಲಿ ಭಾನುವಾರ ಮಧ್ಯಾಹ್ನ ನಡೆಯಲಿದೆ. ‘ನಮ್ಮ ಯಜಮಾನರು’, ‘ಸಿಬಿಐ ದುರ್ಗಾ’, ‘ಪಾರ್ಥ’, ‘ಸರ್ದಾರ’, ‘ಶಂಭು’ ಸೇರಿದಂತೆ ಹಲವು ಚಲನಚಿತ್ರಗಳನ್ನು ರಾಜಶೇಖರ ನಿರ್ಮಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.