ಬೆಂಗಳೂರು: ‘ಅಧೀನ ನ್ಯಾಯಾಲಯಗಳ ನ್ಯಾಯಾಧೀಶರು ತಮ್ಮ ವರ್ಗಾವಣೆಗೆ ಸಂಬಂಧಿಸಿದ ಯಾವುದೇ ಅಹವಾಲುಗಳನ್ನು ನೇರವಾಗಿ ರಿಜಿಸ್ಟ್ರಾರ್ ಜನರಲ್ ಅವರಿಗೆ ಸಲ್ಲಿಸುವಂತಿಲ್ಲ’ ಎಂದು ಹೈಕೋರ್ಟ್ ತಿಳಿಸಿದೆ.
ಈ ಕುರಿತಂತೆ ರಿಜಿಸ್ಟ್ರಾರ್ ಜನರಲ್ ಅಶೋಕ ಜಿ.ನಿಜಗಣ್ಣವರ ಸುತ್ತೋಲೆ ಹೊರಡಿಸಿದ್ದು, ‘ಸಂಬಂಧಿಸಿದ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರ ಮೂಲಕವೇ ಮನವಿ ಸಲ್ಲಿಸಬೇಕು. ಒಂದು ವೇಳೆ ನೇರವಾಗಿ ರಿಜಿಸ್ಟ್ರಾರ್ ಜನರಲ್ಗೆ ಮನವಿ ಸಲ್ಲಿಸಿದರೆ ಅವುಗಳನ್ನು ಪುರಸ್ಕರಿಸಲಾಗದು. ಈ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು’ ಎಂದು ತಾಕೀತು ಮಾಡಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.